<p>ಮಂಡ್ಯ: ‘ಟನ್ ಕಬ್ಬಿಗೆ ಕೇವಲ ₹100 ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನೀತಿ ರೈತರಿಗೆ ಮಾಡಿರುವ ಅಪಮಾನವಾಗಿದ್ದು, ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು’ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.</p>.<p>10.25 ಸಕ್ಕರೆ ಇಳುವರಿಗೆ ಎಫ್ಆರ್ಪಿ ₹3,650 ಹಾಗೂ ಶೇ 9.50 ಸಕ್ಕರೆ ಇಳುವರಿಗೆ ಟನ್ ₹3,383 ನಿಗದಿಪಡಿಸಿರುವ ಕೇಂದ್ರ ಸರ್ಕಾರದ ಕ್ರಮವು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿದೆ ಎಂದು ಆರೋಪಿಸಿದೆ. ಒಂದು ಟನ್ ಕಬ್ಬು ಬೆಳೆಯಲು ಉತ್ಪಾದನಾ ವೆಚ್ಚವನ್ನು ಕೇಂದ್ರ ಸರ್ಕಾರ ಕೇವಲ ₹1,820 ಎಂದು ಅಂದಾಜಿಸಿದೆ. ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಟನ್ ಕಬ್ಬು ಬೆಳೆಯಲು ಕನಿಷ್ಠ ₹3,580 ಬೇಕೆಂದು ಮೂರು ವರ್ಷಗಳ ವರದಿಯೇ ಹೇಳುತ್ತದೆ. ಇದಕ್ಕೆ ಶೇ 10ರಷ್ಟು ಲಾಭಾಂಶ ಸೇರಿಸಿ ₹3,938 ನೀಡಬೇಕು ಎಂದು ಆಗ್ರಹಿಸಿದೆ. ಹರಿಯಾಣ, ಪಂಜಾಬ್,ತಮಿಳುನಾಡುಮಾದರಿಯಲ್ಲಿ ಕರ್ನಾಟಕ ಸರ್ಕಾರವು ಟನ್ಗೆ ₹500 ಎಸ್ಎಪಿ ನಿಗದಿ ಮಾಡಬೇಕು. ಕಳೆದ ಸಾಲಿನ ₹100 ಎಸ್ಎಪಿ ಹಣ ನೀಡಿಲ್ಲ. ಇಲ್ಲಿ ಸಕ್ಕರೆ ಕಾರ್ಖಾನೆಗಳ ಕೈಗೊಂಬೆಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್. ಭರತ್ರಾಜ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-40-140880628</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಟನ್ ಕಬ್ಬಿಗೆ ಕೇವಲ ₹100 ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನೀತಿ ರೈತರಿಗೆ ಮಾಡಿರುವ ಅಪಮಾನವಾಗಿದ್ದು, ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು’ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.</p>.<p>10.25 ಸಕ್ಕರೆ ಇಳುವರಿಗೆ ಎಫ್ಆರ್ಪಿ ₹3,650 ಹಾಗೂ ಶೇ 9.50 ಸಕ್ಕರೆ ಇಳುವರಿಗೆ ಟನ್ ₹3,383 ನಿಗದಿಪಡಿಸಿರುವ ಕೇಂದ್ರ ಸರ್ಕಾರದ ಕ್ರಮವು ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿದೆ ಎಂದು ಆರೋಪಿಸಿದೆ. ಒಂದು ಟನ್ ಕಬ್ಬು ಬೆಳೆಯಲು ಉತ್ಪಾದನಾ ವೆಚ್ಚವನ್ನು ಕೇಂದ್ರ ಸರ್ಕಾರ ಕೇವಲ ₹1,820 ಎಂದು ಅಂದಾಜಿಸಿದೆ. ಕೃಷಿ ಬೆಲೆ ಆಯೋಗದ ಶಿಫಾರಸ್ಸಿನಂತೆ ಟನ್ ಕಬ್ಬು ಬೆಳೆಯಲು ಕನಿಷ್ಠ ₹3,580 ಬೇಕೆಂದು ಮೂರು ವರ್ಷಗಳ ವರದಿಯೇ ಹೇಳುತ್ತದೆ. ಇದಕ್ಕೆ ಶೇ 10ರಷ್ಟು ಲಾಭಾಂಶ ಸೇರಿಸಿ ₹3,938 ನೀಡಬೇಕು ಎಂದು ಆಗ್ರಹಿಸಿದೆ. ಹರಿಯಾಣ, ಪಂಜಾಬ್,ತಮಿಳುನಾಡುಮಾದರಿಯಲ್ಲಿ ಕರ್ನಾಟಕ ಸರ್ಕಾರವು ಟನ್ಗೆ ₹500 ಎಸ್ಎಪಿ ನಿಗದಿ ಮಾಡಬೇಕು. ಕಳೆದ ಸಾಲಿನ ₹100 ಎಸ್ಎಪಿ ಹಣ ನೀಡಿಲ್ಲ. ಇಲ್ಲಿ ಸಕ್ಕರೆ ಕಾರ್ಖಾನೆಗಳ ಕೈಗೊಂಬೆಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿವೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಎನ್. ಭರತ್ರಾಜ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-40-140880628</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>