<p>ರಾಮನಗರ: ‘ಮಂಡ್ಯ ವಿಶ್ವವಿದ್ಯಾಲಯ ಮುಚ್ಚುವ ಕುರಿತು ಸ್ಪಷ್ಟತೆ ಇಲ್ಲ. ಈ ಬಗ್ಗೆ ಅಧ್ಯಯನ ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಂಪುಟ ಉಪ ಸಮಿತಿಯ ಅಂತಿಮ ವರದಿ ಕುರಿತು ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.</p>.<p>‘ಹಿಂದಿನ ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು. ರಾಜಕೀಯ ಸೇರಿ ವಿವಿಧ ಕಾರಣಗಳಿಗಾಗಿ ವಿಶ್ವವಿದ್ಯಾಲಯಗಳನ್ನು ವಿಭಜಿಸಲಾಗಿದೆ. ಮೈಸೂರು ವಿಶ್ವವಿದ್ಯಾಲಯ ಹಾಗು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ವಿಶೇಷ ಗೌರವವಿತ್ತು. ಈಗ ಪ್ರತಿ ಜಿಲ್ಲೆಯಲ್ಲೂ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದರು.</p>.<p>‘ಮಂಡ್ಯ ವಿವಿ ಮುಚ್ಚಿದರೆ ಬೆಂಕಿ ಹಾಕುತ್ತೇವೆ’ ಎಂದು ಶಾಸಕ ಗಣಿಗ ರವಿ ಹೇಳಿಕೆ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಉಹಾಪೋಹದ ಮೇಲೆ ಏನೇನೊ ಮಾತನಾಡುವುದು ಸರಿಯಲ್ಲ. ಆ ಬಗ್ಗೆ ಸಂಪುಟದಲ್ಲಿ ಅಂತಿಮ ನಿರ್ಧಾರವಾಗಲಿದೆ. ಮಂಡ್ಯ ಎಂಎಲ್ಎ ಸ್ಥಳೀಯರ ಮುಂದೆ ಏನು ಹೇಳಬೇಕೋ ಹೇಳುತ್ತಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-40-1023765198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಮಂಡ್ಯ ವಿಶ್ವವಿದ್ಯಾಲಯ ಮುಚ್ಚುವ ಕುರಿತು ಸ್ಪಷ್ಟತೆ ಇಲ್ಲ. ಈ ಬಗ್ಗೆ ಅಧ್ಯಯನ ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಂಪುಟ ಉಪ ಸಮಿತಿಯ ಅಂತಿಮ ವರದಿ ಕುರಿತು ತೀರ್ಮಾನಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.</p>.<p>‘ಹಿಂದಿನ ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿತ್ತು. ರಾಜಕೀಯ ಸೇರಿ ವಿವಿಧ ಕಾರಣಗಳಿಗಾಗಿ ವಿಶ್ವವಿದ್ಯಾಲಯಗಳನ್ನು ವಿಭಜಿಸಲಾಗಿದೆ. ಮೈಸೂರು ವಿಶ್ವವಿದ್ಯಾಲಯ ಹಾಗು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ವಿಶೇಷ ಗೌರವವಿತ್ತು. ಈಗ ಪ್ರತಿ ಜಿಲ್ಲೆಯಲ್ಲೂ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದರು.</p>.<p>‘ಮಂಡ್ಯ ವಿವಿ ಮುಚ್ಚಿದರೆ ಬೆಂಕಿ ಹಾಕುತ್ತೇವೆ’ ಎಂದು ಶಾಸಕ ಗಣಿಗ ರವಿ ಹೇಳಿಕೆ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಉಹಾಪೋಹದ ಮೇಲೆ ಏನೇನೊ ಮಾತನಾಡುವುದು ಸರಿಯಲ್ಲ. ಆ ಬಗ್ಗೆ ಸಂಪುಟದಲ್ಲಿ ಅಂತಿಮ ನಿರ್ಧಾರವಾಗಲಿದೆ. ಮಂಡ್ಯ ಎಂಎಲ್ಎ ಸ್ಥಳೀಯರ ಮುಂದೆ ಏನು ಹೇಳಬೇಕೋ ಹೇಳುತ್ತಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-40-1023765198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>