ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಸಮಾಜದಲ್ಲಿ ಭಯ ಸೃಷ್ಟಿ ಮಾಡಿದ್ದ ದುಷ್ಕರ್ಮಿ ಆದಿತ್ಯ ರಾವ್ನನ್ನು ಮಂಗಳೂರು ಪೊಲೀಸರು ಬುಧವಾರ ಇಡೀ ರಾತ್ರಿ ವಿಚಾರಣೆಗೊಳಪಡಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಆತನನ್ನು ಕೋರ್ಟ್ ಎದುರು ಹಾಜರುಪಡಿಸಲಾಗುತ್ತಿದೆ.
PS Harsha, Mangaluru Commissioner of Police: We've brought him to Mangaluru from Bengaluru, now the accused is in our custody, our investigation team will interrogate him. We will investigate all aspects, he will be produced before Mangaluru 6th JMFC Court. #Karnataka (22.01.20) https://t.co/EHy3Uu54GV
ಅದಿತ್ಯ ರಾವ್ನ ವಾರೆಂಟ್ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 12ಗಂಟೆಗೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯಾಕ್ಕೆ ಆತನನ್ನು ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅರೋಪಿಯನ್ನು ಬುಧವಾರ ರಾತ್ರಿ ಮಧ್ಯರಾತ್ರಿ 12ರ ಸುಮಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಅಲ್ಲಿಂದ ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.