ದೇಶದ ಎಂಟು ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ದೆಹಲಿಯಲ್ಲಿ ಚಾಲನೆ ನೀಡಿದರು. ಮಂಗಳೂರಿನಲ್ಲಿ ರಾಜ್ಯಪಾಲರು ಶಂಕುಸ್ಥಾಪನೆ ನೆರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ., ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ.ರಾವ್ ಉಪಸ್ಥಿತರಿದ್ದರು.