ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪ ಎದುರಿಸುತ್ತಿರುವ ಆದಿತ್ಯ ರಾವ್ನನ್ನು ಮಂಗಳೂರಿನ 6 ನೇ ಜೆಎಂಎಫ್ಸಿ ನ್ಯಾಯಾಲಯ 10 ದಿನ ಪೊಲೀಸ್ ವಶಕ್ಕೆ ನೀಡಲು ತೀರ್ಮಾನಿಸಿದೆ.
ಬುಧವಾರ ರಾತ್ರಿ ವಿಚಾರಣೆ ನಡೆಸಿದ ಪೊಲೀಸರು, ಗುರುವಾರ ಮಧ್ಯಾಹ್ನ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ಇನ್ನೂ ಬಾಕಿ ಇದ್ದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಎಸಿಪಿ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಮನವಿ ಪುರಸ್ಕರಿಸಿದ ನ್ಯಾಯಾಧೀಶರಾದ ಕಿಶೋರ್ ಕುಮಾರ್ ಅವರು, 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.