<p><strong>ಕಾಸರಗೋಡು:</strong> ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆ್ಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ.</p>.ಕಾಸರಗೋಡು, ವಯನಾಡ್ಗೆ ತಲಾ 50 ಎಂಬಿಬಿಎಸ್ ಸೀಟು: ಜನರ ಕಣ್ಣಲ್ಲಿ ಹೊಸ ಭರವಸೆ.<p>ಘಟನೆ ಸಂಬಂಧ ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.</p><p>ಶುಕ್ರವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದು, ಪನತ್ತಡಿ ಗ್ರಾಮದ ಪಾರಕಡವು ಎಂಬಲ್ಲಿರುವ ಆರೋಪಿಯ ಹೆಂಡತಿಯ ಸಹೋದರನ ಮನೆಯಲ್ಲಿ ಪ್ರಕರಣ ಘಟಿಸಿದೆ.</p>.ಕಾಸರಗೋಡು | ಬಿರುಸಿನ ಮಳೆ: ಮಧೂರು ದೇವಾಲಯ ಜಲಾವೃತ.<p>ಮನೋಜ್ ಹಾಗೂ ಪತ್ನಿ ನಡುವಿನ ವೈವಾಹಿಕ ಸಂಬಂಧ ಹಳಸಿತ್ತು. ಆಗಾಗ್ಗೆ ನಡೆಯುತ್ತಿದ್ದ ಜಗಳದಿಂದ ಬೇಸತ್ತು ಮನೆ ತೊರೆದಿದ್ದ ಪತ್ನಿ, ತನ್ನ ಸಹೋದರನ ಮನೆಯಲ್ಲಿ ವಾಸವಾಗಿದ್ದರು.</p><p>ಶುಕ್ರವಾರ ಮನೋಜ್ನ 17 ವರ್ಷದ ಮಗಳು ತನ್ನ 10 ವರ್ಷದ ಸೋದರ ಸಂಬಂಧಿಯೊಂದಿಗೆ ಮನೆಯಂಗಳದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ರಬ್ಬರ್ ಶೀಟುಗಳ ಸಂಸ್ಕರಣೆಗೆ ತಂದಿದ್ದ ಆ್ಯಸಿಡ್ ಅನ್ನು ಬಾಲಕಿಯರ ಮೇಲೆ ಸುರಿದು, ಪಲಾಯನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಕಾಸರಗೋಡು: ಒಂದೇ ಕುಟುಂಬದ ಮೂವರ ಆತ್ಮಹತ್ಯೆ.<p>ದಾಳಿಯಿಂದ ಮನೋಜ್ನ ಮಗಳ ಕೈ ಹಾಗೂ ತೊಡೆಗೆ ಸುಟ್ಟಗಾಯಗಳಾಗಿವೆ. ಆಕೆಯ ಸೋದರ ಸಂಬಂಧಿಯ ಮುಖ ಹಾಗೂ ಕೈಗಳಲ್ಲಿ ಸುಟ್ಟಗಾಯಗಳಾಗಿವೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಸಂತ್ರಸ್ತ ಬಾಲಕಿಯರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.</p>.ಕಾಸರಗೋಡು: ಭೂಸಿಂಗಾರ ಹೆಚ್ಚಿಸಿದ ತುಂಬೆ ಪುಷ್ಪ.<p>ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 329(3) (ಕ್ರಿಮಿನಲ್ ಅತಿಕ್ರಮಣ ಪ್ರವೇಶ), 124(1) (ಆ್ಯಸಿಡ್ ಬಳಸಿ ಗಂಭೀರ ಗಾಯ ಉಂಟುಮಾಡುವುದು), 109(1) (ಕೊಲೆಯತ್ನ), 351(2) (ಕ್ರಿಮಿನಲ್ ಬೆದರಿಕೆ) ಅಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.</p><p>ಕೇರಳ ಹಾಗೂ ಕರ್ನಾಟಕದಲ್ಲಿ ಆರೋಪಿ ಮನೋಜ್ ಪತ್ತೆಗೆ ಯತ್ನಿಸಲಾಗುತ್ತಿದ್ದು, ಅಗತ್ಯ ಬಿದ್ದರೆ ಕರ್ನಾಟಕ ಪೊಲೀಸರ ಸಹಕಾರ ಕೋರುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.</p>.ಕಾಸರಗೋಡು | ‘ಸಾಲ ಪಡೆಯಲು ದಾಖಲೆ ಪತ್ರ ನೀಡದ್ದಕ್ಕೆ ಕೊಲೆ ಮಾಡಿದೆ’ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆ್ಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ.</p>.ಕಾಸರಗೋಡು, ವಯನಾಡ್ಗೆ ತಲಾ 50 ಎಂಬಿಬಿಎಸ್ ಸೀಟು: ಜನರ ಕಣ್ಣಲ್ಲಿ ಹೊಸ ಭರವಸೆ.<p>ಘಟನೆ ಸಂಬಂಧ ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.</p><p>ಶುಕ್ರವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದು, ಪನತ್ತಡಿ ಗ್ರಾಮದ ಪಾರಕಡವು ಎಂಬಲ್ಲಿರುವ ಆರೋಪಿಯ ಹೆಂಡತಿಯ ಸಹೋದರನ ಮನೆಯಲ್ಲಿ ಪ್ರಕರಣ ಘಟಿಸಿದೆ.</p>.ಕಾಸರಗೋಡು | ಬಿರುಸಿನ ಮಳೆ: ಮಧೂರು ದೇವಾಲಯ ಜಲಾವೃತ.<p>ಮನೋಜ್ ಹಾಗೂ ಪತ್ನಿ ನಡುವಿನ ವೈವಾಹಿಕ ಸಂಬಂಧ ಹಳಸಿತ್ತು. ಆಗಾಗ್ಗೆ ನಡೆಯುತ್ತಿದ್ದ ಜಗಳದಿಂದ ಬೇಸತ್ತು ಮನೆ ತೊರೆದಿದ್ದ ಪತ್ನಿ, ತನ್ನ ಸಹೋದರನ ಮನೆಯಲ್ಲಿ ವಾಸವಾಗಿದ್ದರು.</p><p>ಶುಕ್ರವಾರ ಮನೋಜ್ನ 17 ವರ್ಷದ ಮಗಳು ತನ್ನ 10 ವರ್ಷದ ಸೋದರ ಸಂಬಂಧಿಯೊಂದಿಗೆ ಮನೆಯಂಗಳದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ರಬ್ಬರ್ ಶೀಟುಗಳ ಸಂಸ್ಕರಣೆಗೆ ತಂದಿದ್ದ ಆ್ಯಸಿಡ್ ಅನ್ನು ಬಾಲಕಿಯರ ಮೇಲೆ ಸುರಿದು, ಪಲಾಯನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಕಾಸರಗೋಡು: ಒಂದೇ ಕುಟುಂಬದ ಮೂವರ ಆತ್ಮಹತ್ಯೆ.<p>ದಾಳಿಯಿಂದ ಮನೋಜ್ನ ಮಗಳ ಕೈ ಹಾಗೂ ತೊಡೆಗೆ ಸುಟ್ಟಗಾಯಗಳಾಗಿವೆ. ಆಕೆಯ ಸೋದರ ಸಂಬಂಧಿಯ ಮುಖ ಹಾಗೂ ಕೈಗಳಲ್ಲಿ ಸುಟ್ಟಗಾಯಗಳಾಗಿವೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಸಂತ್ರಸ್ತ ಬಾಲಕಿಯರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.</p>.ಕಾಸರಗೋಡು: ಭೂಸಿಂಗಾರ ಹೆಚ್ಚಿಸಿದ ತುಂಬೆ ಪುಷ್ಪ.<p>ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 329(3) (ಕ್ರಿಮಿನಲ್ ಅತಿಕ್ರಮಣ ಪ್ರವೇಶ), 124(1) (ಆ್ಯಸಿಡ್ ಬಳಸಿ ಗಂಭೀರ ಗಾಯ ಉಂಟುಮಾಡುವುದು), 109(1) (ಕೊಲೆಯತ್ನ), 351(2) (ಕ್ರಿಮಿನಲ್ ಬೆದರಿಕೆ) ಅಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.</p><p>ಕೇರಳ ಹಾಗೂ ಕರ್ನಾಟಕದಲ್ಲಿ ಆರೋಪಿ ಮನೋಜ್ ಪತ್ತೆಗೆ ಯತ್ನಿಸಲಾಗುತ್ತಿದ್ದು, ಅಗತ್ಯ ಬಿದ್ದರೆ ಕರ್ನಾಟಕ ಪೊಲೀಸರ ಸಹಕಾರ ಕೋರುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.</p>.ಕಾಸರಗೋಡು | ‘ಸಾಲ ಪಡೆಯಲು ದಾಖಲೆ ಪತ್ರ ನೀಡದ್ದಕ್ಕೆ ಕೊಲೆ ಮಾಡಿದೆ’ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>