<p>ಮಂಗಳೂರು: ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವುದನ್ನು ವಿರೋಧಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ಅಡ್ಡಿಯುಂಟುಮಾಡಿದೆ ಎಂದು ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಇಲ್ಲಿ ಜನಾ ಕ್ರೋಶ ಪ್ರತಿಭಟನಾ ಪಾದಯಾತ್ರೆ ನಡೆಯಿತು.</p>.<p>ಪಿವಿಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಬಿಜೆಪಿ ಕಾರ್ಯ ಕರ್ತರು ಮೆರವಣಿಗೆ ನಡೆಸಿದರು.</p>.<p>ಶಾಸಕ ವೇದವ್ಯಾಸ ಕಾಮತ್ ಮಾತ ನಾಡಿ, ‘ವಿಪಕ್ಷದವರಿಗೆ ಮಹಿಳೆ ಯರು ತಕ್ಕಪಾಠ ಕಲಿಸಲಿದ್ದಾರೆ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಪೂರ್ಣಿಮಾ, ‘ಕೇಂದ್ರ ಸರ್ಕಾರವು ರಾಜಕೀಯವಾಗಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಸಂಸತ್ತಿನಲ್ಲಿ ನಾರಿಶಕ್ತಿ ವಂದನಾ ಮಸೂದೆ ಮಂಡಿಸಿತ್ತು. ಕಾಂಗ್ರೆಸ್ ಸೇರಿದಂತೆ ವಿಪಕ್ಷ ಗಳು ಈ ಮಸೂದೆ ಸೋಲಿಸಿ, ಸಂಭ್ರಮಿಸಿದ್ದನ್ನು ಮಹಿಳಾ ಮೋರ್ಚಾ ಅದನ್ನು ಖಂಡಿಸುತ್ತದೆ’ ಎಂದರು.</p>.<p>ಮಹಿಳಾ ಮೋರ್ಚಾ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷೆ ಪೂರ್ಣಿಮಾ ರಾವ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿದರು. </p>.<p>ಬಿಜೆಪಿ ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಸಂಧ್ಯಾ ವೆಂಕಟೇಶ್, ಮಲಾಕ್ಷಿ, ಶಬರಿ ಶೆಟ್ಟಿ, ವಿನೋದ್ ಮೆಂಡನ್, ಭಾಸ್ಕರಚಂದ್ರ ಶೆಟ್ಟಿ, ರಾಮ ಪ್ರಸಾದ್, ಪ್ರವೀಣ್ ನಿಡ್ಡೇಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-29-510955518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವುದನ್ನು ವಿರೋಧಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ಅಡ್ಡಿಯುಂಟುಮಾಡಿದೆ ಎಂದು ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಇಲ್ಲಿ ಜನಾ ಕ್ರೋಶ ಪ್ರತಿಭಟನಾ ಪಾದಯಾತ್ರೆ ನಡೆಯಿತು.</p>.<p>ಪಿವಿಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಬಿಜೆಪಿ ಕಾರ್ಯ ಕರ್ತರು ಮೆರವಣಿಗೆ ನಡೆಸಿದರು.</p>.<p>ಶಾಸಕ ವೇದವ್ಯಾಸ ಕಾಮತ್ ಮಾತ ನಾಡಿ, ‘ವಿಪಕ್ಷದವರಿಗೆ ಮಹಿಳೆ ಯರು ತಕ್ಕಪಾಠ ಕಲಿಸಲಿದ್ದಾರೆ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಪೂರ್ಣಿಮಾ, ‘ಕೇಂದ್ರ ಸರ್ಕಾರವು ರಾಜಕೀಯವಾಗಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಸಂಸತ್ತಿನಲ್ಲಿ ನಾರಿಶಕ್ತಿ ವಂದನಾ ಮಸೂದೆ ಮಂಡಿಸಿತ್ತು. ಕಾಂಗ್ರೆಸ್ ಸೇರಿದಂತೆ ವಿಪಕ್ಷ ಗಳು ಈ ಮಸೂದೆ ಸೋಲಿಸಿ, ಸಂಭ್ರಮಿಸಿದ್ದನ್ನು ಮಹಿಳಾ ಮೋರ್ಚಾ ಅದನ್ನು ಖಂಡಿಸುತ್ತದೆ’ ಎಂದರು.</p>.<p>ಮಹಿಳಾ ಮೋರ್ಚಾ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷೆ ಪೂರ್ಣಿಮಾ ರಾವ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿದರು. </p>.<p>ಬಿಜೆಪಿ ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಸಂಧ್ಯಾ ವೆಂಕಟೇಶ್, ಮಲಾಕ್ಷಿ, ಶಬರಿ ಶೆಟ್ಟಿ, ವಿನೋದ್ ಮೆಂಡನ್, ಭಾಸ್ಕರಚಂದ್ರ ಶೆಟ್ಟಿ, ರಾಮ ಪ್ರಸಾದ್, ಪ್ರವೀಣ್ ನಿಡ್ಡೇಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-29-510955518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>