<p>ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಜನರ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿರುವ ಸಿ.ಪಿ.ಐ.ಎಂ. ಲಿಬರೇಷನ್ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಯಿತು.</p>.<p>ಸಿ.ಪಿ.ಐ.ಎಂ. ಲಿಬರೇಷನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇಖಾಸಗಿ ಆಸ್ಪತ್ರೆಗಳ ಲಾಭದಾಸೆಗೆ ತಲೆಬಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳನ್ನು ಹಂತ ಹಂತವಾಗಿ ಖಾಸಗೀಕರಣದ ಹಾದಿಗೆ ಒಯ್ಯುತ್ತಿದೆ. ಇದು ಬಡಜನರ ಬದುಕಿನ ಮೇಲೆ ನಡೆಸುತ್ತಿರುವ ದಾಳಿಯಾಗಿದೆ. ಈ ಒಪ್ಪಂದ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸಬೇಕು ಎಂದರು.</p>.<p>ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೊಡಗು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳು ಜನರ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ವನ್ನು ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖಂಡ ಮಹಮ್ಮದ್ ಲುಕ್ಮಾನ್, ತುಳಸೀದಾಸ್ ಆರ್, ಸುಧಾ ರಾವ್ ಬೆಳ್ತಂಗಡಿ ಮಾತನಾಡಿದರು. ಮೋಹನ್ ಕೆ.ಇ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಜೀವ ಬೆಳ್ತಂಗಡಿ, ಪ್ರಜ್ವಲ್, ರವಿ ಕೊಡಗು, ವಿಲ್ಲಿ ವಿಲ್ಸನ್, ಸರಸ್ವತಿ ಕಡೇಶಿವಾಲಯ, ಜಿಲಾನಿ ಮಂಗಳೂರು, ದೀಕ್ಷಾ ಬಜಾಲ್, ಸುಹೈಲ್, ಶೇಖರ ಪುತ್ತೂರು, ಸುಧಾ.ಜಿ.ರಾವ್ ಬೆಳ್ತಂಗಡಿ, ಕುಸುಮಾವತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-29-1523943765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ನಿರ್ವಹಣೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಜನರ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿರುವ ಸಿ.ಪಿ.ಐ.ಎಂ. ಲಿಬರೇಷನ್ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಯಿತು.</p>.<p>ಸಿ.ಪಿ.ಐ.ಎಂ. ಲಿಬರೇಷನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇಖಾಸಗಿ ಆಸ್ಪತ್ರೆಗಳ ಲಾಭದಾಸೆಗೆ ತಲೆಬಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳನ್ನು ಹಂತ ಹಂತವಾಗಿ ಖಾಸಗೀಕರಣದ ಹಾದಿಗೆ ಒಯ್ಯುತ್ತಿದೆ. ಇದು ಬಡಜನರ ಬದುಕಿನ ಮೇಲೆ ನಡೆಸುತ್ತಿರುವ ದಾಳಿಯಾಗಿದೆ. ಈ ಒಪ್ಪಂದ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸಬೇಕು ಎಂದರು.</p>.<p>ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೊಡಗು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳು ಜನರ ಸಾಂವಿಧಾನಿಕ ಹಕ್ಕು. ಆ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ವನ್ನು ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.</p>.<p>ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖಂಡ ಮಹಮ್ಮದ್ ಲುಕ್ಮಾನ್, ತುಳಸೀದಾಸ್ ಆರ್, ಸುಧಾ ರಾವ್ ಬೆಳ್ತಂಗಡಿ ಮಾತನಾಡಿದರು. ಮೋಹನ್ ಕೆ.ಇ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಂಜೀವ ಬೆಳ್ತಂಗಡಿ, ಪ್ರಜ್ವಲ್, ರವಿ ಕೊಡಗು, ವಿಲ್ಲಿ ವಿಲ್ಸನ್, ಸರಸ್ವತಿ ಕಡೇಶಿವಾಲಯ, ಜಿಲಾನಿ ಮಂಗಳೂರು, ದೀಕ್ಷಾ ಬಜಾಲ್, ಸುಹೈಲ್, ಶೇಖರ ಪುತ್ತೂರು, ಸುಧಾ.ಜಿ.ರಾವ್ ಬೆಳ್ತಂಗಡಿ, ಕುಸುಮಾವತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-29-1523943765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>