ಸುರತ್ಕಲ್: ಮಹಮ್ಮದ್ ಫಾಝಿಲ್ ಹತ್ಯೆ ತನಿಖೆಯ ಹಂತದಲ್ಲಿದ್ದು, ಕಾರಣ ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು,ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಸಂಬಂಧಿಸಿದ ವಿಚಾರದ ಬಗ್ಗೆ ಹಾಕುತ್ತಿರುವ ಪೋಸ್ಟ್ಗಳನ್ನು ಗಮನಿಸಲಾಗುತ್ತಿದೆ. ಸೈಬರ್ ಕ್ರೈ ಪೊಲೀಸರ ಸಹಕಾರ ಪಡೆದು, ಇಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಫಾಝಿಲ್ ಮನೆಗೆ ಭೇಟಿ: ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಪಾಝಿಲ್ ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಯಾವುದೇಅಹಿತಕರ ಘಟನೆಗೆ ಅವಕಾಶ ನೀಡದೆ, ಶಾಂತಿಯಿಂದ ಅಂತ್ಯಕ್ರಿಯೆ ನೆರವೇರಿಸಿದ್ದಕ್ಕೆ ಸರ್ವರನ್ನು ಅಭಿನಂದಿಸಿದರು.
ಮಾಜಿ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವಾ, ಐವನ್ ಡಿಸೋಜ, ಮುಸ್ಲಿಂ ಜಮಾತ್ ಅಧ್ಯಕ್ಷ ಮಮ್ತಾಜ್ ಅಲಿ, ಸರ್ಫರಾಜ್, ಮುನೀರ್ ಕಾಟಿಪಳ್ಳ, ಶರೀಫ್ ಎಂ.ಎಸ್., ಅಬುಬಕ್ಕರ್ ಕುಳಾಯಿ ಸ್ಥಳದಲ್ಲಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.