ಗೃಹ ಸಚಿವರ ಉತ್ತರಕ್ಕೆ ತೃಪ್ತರಾಗದ ಕೋಟ ಶ್ರೀನಿವಾಸ ಪೂಜಾರಿ, ಭಾರತಿ ಶೆಟ್ಟಿ, ರವಿಕುಮಾರ್, ‘ಸರ್ಕಾರಕ್ಕೆ ಇದೆಲ್ಲ ಶೋಭೆ ತರುವುದಿಲ್ಲ. ಬಿಜೆಪಿ ಶಾಸಕರು, ಕಾರ್ಯಕರ್ತರನ್ನೇ ಗುರಿ ಮಾಡಲಾಗುತ್ತಿದೆ. ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ಎಫ್ಐಆರ್ ಹಾಕಿಸಿ, ಜೈಲಿಗೆ ಕಳುಹಿಸಿಬಿಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.