ಜಲೀಲ್ ಅವರು ಕೃಷ್ಣಾಪುರದ 4ನೇ ಬ್ಲಾಕ್ನಲ್ಲಿ ‘ಲತೀಫಾ ಸ್ಟೋರ್’ ಎಂಬ ದಿನಸಿ ಅಂಗಡಿಯನ್ನು ನಡೆಸುತ್ತಿದ್ದರು. ಅವರು ವ್ಯಾಪಾರ ನಡೆಸುತ್ತಿದ್ದ ವೇಳೆ ಬಂದ ಇಬ್ಬರು ಏಕಾಏಕಿ ಅವರ ಎದೆಗೆ ಚೂರಿಯಿಂದ ಇರಿದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಅಕ್ಕಪಕ್ಕದ ಅಂಗಡಿಯವರು ಹಾಗೂ ಸ್ಥಳೀಯರು ಸೇರಿ ಮುಕ್ಕದ ಆಸ್ಪತ್ರೆಗೆ ದಾಖಲಿಸಿದರು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.