<p><strong>ಬೆಂಗಳೂರು:</strong> ರಾಜ್ಯದ ಮಾವು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದು, ಕನಿಷ್ಠ ಬೆಂಬಲ ಬೆಲೆ ನೀಡಿ, ರೈತರಿಂದ ಮಾವು ಖರೀದಿಸಿ ನೆರವಾಗುವಂತೆ ಕೋರಿದ್ದಾರೆ.</p><p>ಕರ್ನಾಟಕದಲ್ಲಿ ಮಾವು ಒಂದು ಪ್ರಮುಖ ತೋಟಗಾರಿಕಾ ಬೆಳೆಯಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಾಗುತ್ತಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಅಂದಾಜು 8-10 ಲಕ್ಷ ಟನ್ ಮಾವು ಉತ್ಪಾದನೆಯಾಗುತ್ತದೆ. ಆದರೆ ಪ್ರತಿಕೂಲ ಹವಾಮಾನ ಪರಿಸ್ಥಿತಿ ಮತ್ತು ರೋಗಗಳಿಂದಾಗಿ ಈ ವರ್ಷ ಇಳುವರಿ ಶೇ 30ಕ್ಕಿಂತ ಕಡಿಮೆಯಾಗಿದೆ ಎಂದು ರೈತರು ಹೇಳಿದ್ದಾರೆ.</p><p>ಈ ವರ್ಷದ ಮೇ ಮತ್ತು ಜೂನ್ ನಡುವೆ, ಮಾವಿನಹಣ್ಣಿನ ಬೆಲೆಯಲ್ಲಿ ತೀವ್ರ ಏರಿಳಿತವಾಗಿದೆ. ಕ್ವಿಂಟಲ್ಗೆ ₹2,12,000 ರಿಂದ ಕ್ವಿಂಟಲ್ಗೆ ₹23,000ಕ್ಕೆ ಇಳಿದಿದೆ. ಆದರೆ ಕೃಷಿಯ ಸರಾಸರಿ ವೆಚ್ಚವು ಕ್ವಿಂಟಲ್ಗೆ ₹85,466 ರಷ್ಟಿದೆ. ಈ ತೀವ್ರ ಕುಸಿತವು ಗಂಭೀರ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ತಾವು ಬೆಳೆ ಬೆಳೆಯಲು ವ್ಯಯಿಸಿದ ಖರ್ಚನ್ನೂ ಮರುಪಡೆಯಲಾಗುತ್ತಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p><p>ಈ ಸಮಸ್ಯೆಯ ನಡುವೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕದ ಗಡಿಯಲ್ಲಿರುವ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಪ್ರವೇಶವನ್ನು ನಿಷೇಧಿಸಿದೆ. ಪೂರೈಕೆ ಸರಪಳಿಯಲ್ಲಿನ ಈ ಅಡ್ಡಿಯು ಗಡಿ ಪ್ರದೇಶಗಳಲ್ಲಿನ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ವಿಶೇಷವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉದ್ವಿಗ್ನತೆ ಮತ್ತು ಪ್ರತಿಭಟನೆಗೆ ಕಾರಣವಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗಳು ಆಂಧ್ರಪ್ರದೇಶ ಸರ್ಕಾರವನ್ನು ಈ ನಿಷೇಧವನ್ನು ಆದಷ್ಟು ಬೇಗ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದಿದ್ದಾರೆ.</p><p>ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆ ಮತ್ತು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ರಾಜ್ಯದ ಮಾವು ಸಂಗ್ರಹಿಸಲು ಕೇಂದ್ರ ಸರ್ಕಾರವು ನಾಫೆಡ್ಗೆ ಸೂಚಿಸಬೇಕೆಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.</p>.ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಮಾವು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದು, ಕನಿಷ್ಠ ಬೆಂಬಲ ಬೆಲೆ ನೀಡಿ, ರೈತರಿಂದ ಮಾವು ಖರೀದಿಸಿ ನೆರವಾಗುವಂತೆ ಕೋರಿದ್ದಾರೆ.</p><p>ಕರ್ನಾಟಕದಲ್ಲಿ ಮಾವು ಒಂದು ಪ್ರಮುಖ ತೋಟಗಾರಿಕಾ ಬೆಳೆಯಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಾಗುತ್ತಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಅಂದಾಜು 8-10 ಲಕ್ಷ ಟನ್ ಮಾವು ಉತ್ಪಾದನೆಯಾಗುತ್ತದೆ. ಆದರೆ ಪ್ರತಿಕೂಲ ಹವಾಮಾನ ಪರಿಸ್ಥಿತಿ ಮತ್ತು ರೋಗಗಳಿಂದಾಗಿ ಈ ವರ್ಷ ಇಳುವರಿ ಶೇ 30ಕ್ಕಿಂತ ಕಡಿಮೆಯಾಗಿದೆ ಎಂದು ರೈತರು ಹೇಳಿದ್ದಾರೆ.</p><p>ಈ ವರ್ಷದ ಮೇ ಮತ್ತು ಜೂನ್ ನಡುವೆ, ಮಾವಿನಹಣ್ಣಿನ ಬೆಲೆಯಲ್ಲಿ ತೀವ್ರ ಏರಿಳಿತವಾಗಿದೆ. ಕ್ವಿಂಟಲ್ಗೆ ₹2,12,000 ರಿಂದ ಕ್ವಿಂಟಲ್ಗೆ ₹23,000ಕ್ಕೆ ಇಳಿದಿದೆ. ಆದರೆ ಕೃಷಿಯ ಸರಾಸರಿ ವೆಚ್ಚವು ಕ್ವಿಂಟಲ್ಗೆ ₹85,466 ರಷ್ಟಿದೆ. ಈ ತೀವ್ರ ಕುಸಿತವು ಗಂಭೀರ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ತಾವು ಬೆಳೆ ಬೆಳೆಯಲು ವ್ಯಯಿಸಿದ ಖರ್ಚನ್ನೂ ಮರುಪಡೆಯಲಾಗುತ್ತಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p><p>ಈ ಸಮಸ್ಯೆಯ ನಡುವೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕದ ಗಡಿಯಲ್ಲಿರುವ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಪ್ರವೇಶವನ್ನು ನಿಷೇಧಿಸಿದೆ. ಪೂರೈಕೆ ಸರಪಳಿಯಲ್ಲಿನ ಈ ಅಡ್ಡಿಯು ಗಡಿ ಪ್ರದೇಶಗಳಲ್ಲಿನ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ವಿಶೇಷವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉದ್ವಿಗ್ನತೆ ಮತ್ತು ಪ್ರತಿಭಟನೆಗೆ ಕಾರಣವಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗಳು ಆಂಧ್ರಪ್ರದೇಶ ಸರ್ಕಾರವನ್ನು ಈ ನಿಷೇಧವನ್ನು ಆದಷ್ಟು ಬೇಗ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದಿದ್ದಾರೆ.</p><p>ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆ ಮತ್ತು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ರಾಜ್ಯದ ಮಾವು ಸಂಗ್ರಹಿಸಲು ಕೇಂದ್ರ ಸರ್ಕಾರವು ನಾಫೆಡ್ಗೆ ಸೂಚಿಸಬೇಕೆಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.</p>.ರಾಜ್ಯದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>