<p><strong>ಬಾಗಲಕೋಟೆ: </strong>ಪ್ರಧಾನಿ ನರೇಂದ್ರ ಮೋದಿ ಭಾನುವಾರಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಮುಧೋಳ ತಳಿ ನಾಯಿಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಆಕಾಶವಾಣಿ ಮೂಲಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬಾಂಬ್ ಪತ್ತೆ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಧೋಳ ತಳಿ ನಾಯಿಗಳು ಪೊಲೀಸರು, ರಕ್ಷಣಾ ಪಡೆಗೆ ಅತ್ಯಮೂಲ್ಯ ನೆರವು ನೀಡುತ್ತಿವೆ. ಈ ತಳಿಯ ನಾಯಿಗಳಿಗೆ ತರಬೇತಿ ನೀಡಿ ಸಿಐಎಸ್ಎಫ್, ಸೇನೆ, ಎನ್ಎಸ್ಜಿ ಪಡೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. ಮುಧೋಳ ತಳಿ, ರಾಜಪಾಳ್ಯಂ ತಳಿ ಸೇರಿದಂತೆ ದೇಸಿ ಶ್ವಾನ ತಳಿಗಳ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ’ಎಂದು ಹೇಳಿದ್ದಾರೆ.</p>.<p>ಮುಧೋಳ ದ ಮಹಾರಾಜ ಮಾಳೋಜಿರಾವ್ ಘೋರ್ಪಡೆ ಪರ್ಶಿಯನ್ ಹಾಗೂ ಸ್ಥಳೀಯ ನಾಯಿ ತಳಿಗಳ ಸಂಕರದ ಮೂಲಕ ಮುಧೋಳ ನಾಯಿ ತಳಿಗಳ ಅಭಿವೃದ್ಧಿ ಗೆ ಒತ್ತು ನೀಡಿದ್ದರು. ಮುಧೋಳ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಶ್ವಾನ ಸಂಶೋಧನೆ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ ತಳಿಗಳ ವಂಶಾಭಿವೃದ್ಧಿ ಕೈಗೊಳ್ಳಲಾಗುತ್ತಿದೆ.</p>.<p>ಈವರೆಗೆ ಸೇನೆ-ಅರೆಸೇನಾಪಡೆಗಳು 20 ನಾಯಿಗಳನ್ನು ತರಬೇತಿಗಾಗಿ ಪಡೆದಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/india-can-become-worlds-toy-hub-time-to-be-vocal-about-local-toys-pm-757234.html" target="_blank"> ‘ಮನ್ ಕಿ ಬಾತ್’ನಲ್ಲಿ ಚನ್ನಟ್ಟಣದ ಗೊಂಬೆ ಉದ್ಯಮವನ್ನು ಉಲ್ಲೇಖಿಸಿದ ಪ್ರಧಾನಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಪ್ರಧಾನಿ ನರೇಂದ್ರ ಮೋದಿ ಭಾನುವಾರಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಮುಧೋಳ ತಳಿ ನಾಯಿಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಆಕಾಶವಾಣಿ ಮೂಲಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬಾಂಬ್ ಪತ್ತೆ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಧೋಳ ತಳಿ ನಾಯಿಗಳು ಪೊಲೀಸರು, ರಕ್ಷಣಾ ಪಡೆಗೆ ಅತ್ಯಮೂಲ್ಯ ನೆರವು ನೀಡುತ್ತಿವೆ. ಈ ತಳಿಯ ನಾಯಿಗಳಿಗೆ ತರಬೇತಿ ನೀಡಿ ಸಿಐಎಸ್ಎಫ್, ಸೇನೆ, ಎನ್ಎಸ್ಜಿ ಪಡೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. ಮುಧೋಳ ತಳಿ, ರಾಜಪಾಳ್ಯಂ ತಳಿ ಸೇರಿದಂತೆ ದೇಸಿ ಶ್ವಾನ ತಳಿಗಳ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ’ಎಂದು ಹೇಳಿದ್ದಾರೆ.</p>.<p>ಮುಧೋಳ ದ ಮಹಾರಾಜ ಮಾಳೋಜಿರಾವ್ ಘೋರ್ಪಡೆ ಪರ್ಶಿಯನ್ ಹಾಗೂ ಸ್ಥಳೀಯ ನಾಯಿ ತಳಿಗಳ ಸಂಕರದ ಮೂಲಕ ಮುಧೋಳ ನಾಯಿ ತಳಿಗಳ ಅಭಿವೃದ್ಧಿ ಗೆ ಒತ್ತು ನೀಡಿದ್ದರು. ಮುಧೋಳ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಶ್ವಾನ ಸಂಶೋಧನೆ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿ ತಳಿಗಳ ವಂಶಾಭಿವೃದ್ಧಿ ಕೈಗೊಳ್ಳಲಾಗುತ್ತಿದೆ.</p>.<p>ಈವರೆಗೆ ಸೇನೆ-ಅರೆಸೇನಾಪಡೆಗಳು 20 ನಾಯಿಗಳನ್ನು ತರಬೇತಿಗಾಗಿ ಪಡೆದಿವೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/india-can-become-worlds-toy-hub-time-to-be-vocal-about-local-toys-pm-757234.html" target="_blank"> ‘ಮನ್ ಕಿ ಬಾತ್’ನಲ್ಲಿ ಚನ್ನಟ್ಟಣದ ಗೊಂಬೆ ಉದ್ಯಮವನ್ನು ಉಲ್ಲೇಖಿಸಿದ ಪ್ರಧಾನಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>