ಆಕಾಶವಾಣಿ ಮೂಲಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬಾಂಬ್ ಪತ್ತೆ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಧೋಳ ತಳಿ ನಾಯಿಗಳು ಪೊಲೀಸರು, ರಕ್ಷಣಾ ಪಡೆಗೆ ಅತ್ಯಮೂಲ್ಯ ನೆರವು ನೀಡುತ್ತಿವೆ. ಈ ತಳಿಯ ನಾಯಿಗಳಿಗೆ ತರಬೇತಿ ನೀಡಿ ಸಿಐಎಸ್ಎಫ್, ಸೇನೆ, ಎನ್ಎಸ್ಜಿ ಪಡೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. ಮುಧೋಳ ತಳಿ, ರಾಜಪಾಳ್ಯಂ ತಳಿ ಸೇರಿದಂತೆ ದೇಸಿ ಶ್ವಾನ ತಳಿಗಳ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ’ಎಂದು ಹೇಳಿದ್ದಾರೆ.