ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯುತ್ತಿಲ್ಲ. ಜಿಲ್ಲೆಯ ವಿವಿಧೆಡೆ ಕೆಲಕಾಲ ಜೋರಾಗಿ ಸುರಿಯುವ ಮಳೆ ನಂತರ ನಿಂತು ಹೋಗುತ್ತಿದೆ. ಹೀಗಾಗಿ ಜೂನ್ನಲ್ಲಿಯೂ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣವಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಜೋಳ, ಶುಂಠಿ, ರಾಗಿ, ತಂಬಾಕು ಹಾಗೂ ತಗ್ಗು ಪ್ರದೇಶದಲ್ಲಿ ಭತ್ತ ಮತ್ತಿತರ ಬೀಜಗಳನ್ನು ಬಿತ್ತಿರುವ ರೈತರು ಮಳೆ ಬರುತ್ತಿಲ್ಲ ಎಂದು ಚಿಂತೆಗೊಳಗಾಗಿದ್ದಾರೆ. ಒಂದೆಡೆ ಮಳೆಯಿಲ್ಲ, ಮತ್ತೊಂದೆಡೆ ಜಲಾಶಯದಲ್ಲಿ ನೀರಿಲ್ಲ ಎಂಬ ಆತಂಕ ಕೂಡಾ ಆಗಿದೆ.