ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ರಾಜಕುಮಾರ್‌ ನಿಧನಕ್ಕೆ ಶ್ರೀಸುಬುಧೇಂದ್ರ ತೀರ್ಥ ಸ್ವಾಮಿ ಸಂತಾಪ

Last Updated 29 ಅಕ್ಟೋಬರ್ 2021, 14:20 IST
ಅಕ್ಷರ ಗಾತ್ರ

ಮಂತ್ರಾಲಯ: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿಶ್ರೀಸುಬುಧೇಂದ್ರ ತೀರ್ಥ ಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಜನಪ್ರಿಯ ಚಲನಚಿತ್ರ ನಟ ಪುನೀತ್‌ ರಾಜಕುಮಾರ್‌ ಅವರು ಅಕಾಲಿಕವಾಗಿ ಮರಣ ಹೊಂದಿದ್ದು, ಚಲನಚಿತ್ರ ರಂಗಕ್ಕೆ ಮಾತ್ರವಲ್ಲ ರಾಘವೇಂದ್ರ ಸ್ವಾಮಿಗಳ ಭಕ್ತ ಸಮುದಾಯಕ್ಕೂ ಅಪಾರವಾದ ಹಾನಿಯಾಗಿದೆ. ಅವರ ಕುಟುಂಬದ ಸದಸ್ಯರೆಲ್ಲರೂ ನಿರಂತರವಾಗಿ ರಾಯರಲ್ಲಿ ಭಕ್ತಿ ಹೊಂದಿದೆ. ರಾಯರ ಕುರಿತು ಮಂತ್ರಾಲಯದಲ್ಲಿ ಭಕ್ತಿಭಾವುಕರಾಗಿ ಪುನೀತ್‌ ರಾಜಕುಮಾರ್‌ ಭಕ್ತಿಗೀತೆ ಹಾಡಿದ್ದರು ಎಂಬುದನ್ನು ಸ್ಮರಿಸಿಕೊಳ್ಳುತ್ತೇನೆ. ಅಂತಹ ವ್ಯಕ್ತಿ ಈಗ ಇಲ್ಲ ಎನ್ನುವುದು ತುಂಬಾ ನೋವಿನ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
-

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT