<p><strong>ಹೊಸಪೇಟೆ:</strong> ‘ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವಿ ಪದವಿಗೆ ಆಯ್ಕೆ ಮಾಡಲಾಗಿದೆ’ ಎಂದು ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ತಿಳಿಸಿದರು.</p>.<p>ಸೋಮವಾರ ವಿ.ವಿ.ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಐ.ಎ.ಎಸ್. ಅಧಿಕಾರಿ, ಪರಿಷತ್ತಿನ ಅಧ್ಯಕ್ಷರಾಗಿ ಅವರು ನಿರ್ವಹಿಸಿದ ಕೆಲಸ ಹಾಗೂ ಅವರ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ಅವರಿಗೆ ಈ ಗೌರವ ಪದವಿ ಪ್ರದಾನ ಮಾಡಲಾಗುತ್ತಿದೆ. ನಾಡೋಜಕ್ಕೆ ಮೂವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯಪಾಲರು ಮನು ಬಳಿಗಾರ ಅವರ ಒಬ್ಬರ ಹೆಸರು ಅಂತಿಮಗೊಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಜ. 30ರಂದು ಸಂಜೆ 5.30ಕ್ಕೆ ವಿ.ವಿ.ಯಲ್ಲಿ ನಡೆಯಲಿರುವ 27ನೇ ನುಡಿಹಬ್ಬದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಳಿಗಾರ ಅವರಿಗೆ ನಾಡೋಜ ಪ್ರದಾನ ಮಾಡುವರು. ವಿಜ್ಞಾನಿ ಎ.ಎಸ್. ಕಿರಣ ಕುಮಾರ ಘಟಿಕೋತ್ಸವ ಭಾಷಣ ಮಾಡುವರು’ ಎಂದು ತಿಳಿಸಿದರು.</p>.<p>‘ಕನ್ನಡ ಸಿನಿಮಾ ಚಾರಿತ್ರಿಕ ನೋಟ’ ಮತ್ತು ‘ಕರ್ನಾಟಕ ದಲಿತ ಚಳವಳಿ’ ಕುರಿತು ಕ್ರಮವಾಗಿ ಪ್ರಬಂಧ ಮಂಡಿಸಿರುವ ರಾಮದಾಸ್ ನಾಯ್ಡು ಹಾಗೂ ಆರ್. ಮೋಹನರಾಜ್ ಅವರಿಗೆಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಡಿ.ಲಿಟ್. ಪದವಿ ಪ್ರದಾನ ಮಾಡುವರು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವಿ ಪದವಿಗೆ ಆಯ್ಕೆ ಮಾಡಲಾಗಿದೆ’ ಎಂದು ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ತಿಳಿಸಿದರು.</p>.<p>ಸೋಮವಾರ ವಿ.ವಿ.ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಐ.ಎ.ಎಸ್. ಅಧಿಕಾರಿ, ಪರಿಷತ್ತಿನ ಅಧ್ಯಕ್ಷರಾಗಿ ಅವರು ನಿರ್ವಹಿಸಿದ ಕೆಲಸ ಹಾಗೂ ಅವರ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ಅವರಿಗೆ ಈ ಗೌರವ ಪದವಿ ಪ್ರದಾನ ಮಾಡಲಾಗುತ್ತಿದೆ. ನಾಡೋಜಕ್ಕೆ ಮೂವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯಪಾಲರು ಮನು ಬಳಿಗಾರ ಅವರ ಒಬ್ಬರ ಹೆಸರು ಅಂತಿಮಗೊಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಜ. 30ರಂದು ಸಂಜೆ 5.30ಕ್ಕೆ ವಿ.ವಿ.ಯಲ್ಲಿ ನಡೆಯಲಿರುವ 27ನೇ ನುಡಿಹಬ್ಬದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಳಿಗಾರ ಅವರಿಗೆ ನಾಡೋಜ ಪ್ರದಾನ ಮಾಡುವರು. ವಿಜ್ಞಾನಿ ಎ.ಎಸ್. ಕಿರಣ ಕುಮಾರ ಘಟಿಕೋತ್ಸವ ಭಾಷಣ ಮಾಡುವರು’ ಎಂದು ತಿಳಿಸಿದರು.</p>.<p>‘ಕನ್ನಡ ಸಿನಿಮಾ ಚಾರಿತ್ರಿಕ ನೋಟ’ ಮತ್ತು ‘ಕರ್ನಾಟಕ ದಲಿತ ಚಳವಳಿ’ ಕುರಿತು ಕ್ರಮವಾಗಿ ಪ್ರಬಂಧ ಮಂಡಿಸಿರುವ ರಾಮದಾಸ್ ನಾಯ್ಡು ಹಾಗೂ ಆರ್. ಮೋಹನರಾಜ್ ಅವರಿಗೆಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಡಿ.ಲಿಟ್. ಪದವಿ ಪ್ರದಾನ ಮಾಡುವರು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>