<p><strong>ಚಿತ್ರದುರ್ಗ:</strong> ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಲ್ಲಿಯವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 6 ಮಂದಿ ನಾಪತ್ತೆಯಾಗಿದ್ದು 21 ಮಂದಿ ಗಾಯಗೊಂಡಿದ್ದಾರೆ.</p>.ಚಿತ್ರದುರ್ಗ ಬಸ್ ಅಪಘಾತ: ಆಶ್ಚರ್ಯಕರ ರೀತಿಯಲ್ಲಿ ಪಾರಾದ ಶಾಲಾ ಮಕ್ಕಳು.<p>ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಸೀಬರ್ಡ್ ಸ್ಲೀಪರ್ (ನಾನ್ ಎಸಿ)- ಬಸ್ ಸುಟ್ಟು ಕರಕಲಾಗಿದೆ. ಸಜೀವವಾಗಿ ದಹನಗೊಂಡ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹರಿಯಾಣ ನೋಂದಣಿಯ ಕ್ಯಾಂಟರ್ ಚಾಲಕ ಕೂಡ ಮೃತಪಟ್ಟಿದ್ದಾನೆ.</p><p>ಸ್ಥಳಕ್ಕೆ ಬಂದಿರುವ ವಿಧಿ ವಿಜ್ಞಾನ ಪ್ರಯೋಗಾಲಯ, ಬೆರಳಚ್ಚು ತಜ್ಞರು ಬಸ್ ನಲ್ಲಿ ಸುಟ್ಟು ಹೋದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಡಿಎನ್ ಎ ಪರೀಕ್ಷೆಯ ನಂತರ ಮೃತಪಟ್ಟವರ ಸಂಖ್ಯೆ ಹಾಗೂ ಗುರುತು ಪತ್ತೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ.<h2>ಜಿಗಿದು ಪ್ರಾಣ ರಕ್ಷಿಸಿಕೊಂಡರು:</h2><p>ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹಲವರು ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ. </p><p>ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಣ ಸ್ಥಳೀಯರು ಬಸ್ ಬಳಿ ತೆರಳಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಘಟನೆ ನಡೆದ 20 ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು.</p>.ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ.<p>ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ 11, ತುಮಕೂರು ಜಿಲ್ಲೆ, ಶಿರಾ ಆಸ್ಪತ್ರೆಯಲ್ಲಿ 8, ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಬಸ್ ಚಾಲಕ ರಫೀಕ್, ಕ್ಲೀನರ್ ಮೊಹಮ್ಮದ್ ಸಾದಿಕ್ ಹಿರಿಯೂರು ಆಸ್ಪತ್ರೆಯಲ್ಲಿ ಇದ್ದಾರೆ.</p>.ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಲ್ಲಿಯವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 6 ಮಂದಿ ನಾಪತ್ತೆಯಾಗಿದ್ದು 21 ಮಂದಿ ಗಾಯಗೊಂಡಿದ್ದಾರೆ.</p>.ಚಿತ್ರದುರ್ಗ ಬಸ್ ಅಪಘಾತ: ಆಶ್ಚರ್ಯಕರ ರೀತಿಯಲ್ಲಿ ಪಾರಾದ ಶಾಲಾ ಮಕ್ಕಳು.<p>ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಸೀಬರ್ಡ್ ಸ್ಲೀಪರ್ (ನಾನ್ ಎಸಿ)- ಬಸ್ ಸುಟ್ಟು ಕರಕಲಾಗಿದೆ. ಸಜೀವವಾಗಿ ದಹನಗೊಂಡ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹರಿಯಾಣ ನೋಂದಣಿಯ ಕ್ಯಾಂಟರ್ ಚಾಲಕ ಕೂಡ ಮೃತಪಟ್ಟಿದ್ದಾನೆ.</p><p>ಸ್ಥಳಕ್ಕೆ ಬಂದಿರುವ ವಿಧಿ ವಿಜ್ಞಾನ ಪ್ರಯೋಗಾಲಯ, ಬೆರಳಚ್ಚು ತಜ್ಞರು ಬಸ್ ನಲ್ಲಿ ಸುಟ್ಟು ಹೋದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಡಿಎನ್ ಎ ಪರೀಕ್ಷೆಯ ನಂತರ ಮೃತಪಟ್ಟವರ ಸಂಖ್ಯೆ ಹಾಗೂ ಗುರುತು ಪತ್ತೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ.<h2>ಜಿಗಿದು ಪ್ರಾಣ ರಕ್ಷಿಸಿಕೊಂಡರು:</h2><p>ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹಲವರು ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ. </p><p>ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಣ ಸ್ಥಳೀಯರು ಬಸ್ ಬಳಿ ತೆರಳಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಘಟನೆ ನಡೆದ 20 ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು.</p>.ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ.<p>ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ 11, ತುಮಕೂರು ಜಿಲ್ಲೆ, ಶಿರಾ ಆಸ್ಪತ್ರೆಯಲ್ಲಿ 8, ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಬಸ್ ಚಾಲಕ ರಫೀಕ್, ಕ್ಲೀನರ್ ಮೊಹಮ್ಮದ್ ಸಾದಿಕ್ ಹಿರಿಯೂರು ಆಸ್ಪತ್ರೆಯಲ್ಲಿ ಇದ್ದಾರೆ.</p>.ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>