ಶಿವಮೊಗ್ಗ/ಕಡೂರು: ರಾಜ್ಯದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಡೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಮತಿಘಟ್ಟ ಬಳಿ ಟೆಂಪೊ ಟ್ರಾವೆಲರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಫಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು ರಾಜಾಜಿನಗರದ ಗಿರಿಧರ (53), ಮಯಾಂಕ್ (3) ಸ್ಥಳದಲ್ಲಿ ಮೃತಪಟ್ಟವರು. ತೀವ್ರ ಗಾಯಗೊಂಡಿದ್ದ ಗಿರಿಧರ ಅವರ ಸಂಬಂಧಿ ಶೋಭಾ (50) ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಗಿರಿಧರ ಅವರು ಮದುವೆ ಕಾರ್ಯಕ್ರಮಕ್ಕೆಂದು ಹೊನ್ನಾವರಕ್ಕೆ ತೆರಳುತ್ತಿದ್ದರು. ಈ ಸಮಯ ಮತಿಘಟ್ಟದ ಕುರುಬರಹಳ್ಳಿ ಗೇಟ್ ಬಳಿ ಟೆಂಪೊ ಟ್ರಾವೆಲರ್ಗೆ ಮುಖಾಮುಖಿ ಡಿಕ್ಕಿಯಾಗಿ ಅಫಘಾತ ಸಂಭವಿಸಿದೆ. ಟಿ.ಟಿ. ಗಾಡಿಯಲ್ಲಿದ್ದ ಕೇರಳ ಮೂಲದ ಏಳು ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಗುರುವಾರ ಸಂಜೆ ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ಸಾವಿಗೀಡಾಗಿದ್ದಾರೆ.