<p><strong>ಬೆಂಗಳೂರು:</strong> ವಿಧಾನ ಪರಿಷತ್ನಲ್ಲಿ ಗುರುವಾರ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪತ್ರವೊಂದನ್ನು ಸಭಾಧ್ಯಕ್ಷರ ಪೀಠದ ಎದುರಿನ ಸ್ಥಳಕ್ಕೆ ಎಸೆದಿದ್ದು, ಕೋಲಾಹಲಕ್ಕೆ ಕಾರಣವಾಗಿದೆ.</p>.<p>ಮರಿತಿಬ್ಬೇಗೌಡ ಅವರನ್ನು ಅಮಾನತು ಮಾಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದರು.</p>.<p>ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ಮರಿತಿಬ್ಬೇಗೌಡ ಪ್ರಶ್ನೆ ಕೇಳಿದರು. ಜಲ ಸಂಪನ್ಮೂಲ ಸಚಿವರ ಪರವಾಗಿ ಬೊಮ್ಮಾಯಿ ಉತ್ತರಿಸಿದರು.</p>.<p>ಮದ್ದೂರು ತಾಲ್ಲೂಕಿನ ಕಾಮಗಾರಿಗಳಿಗೆ ಮಾತ್ರ ಒಪ್ಪಿಗೆ ನೀಡಿರುವುದಕ್ಕೆ ಮರಿತಿಬ್ಬೇಗೌಡ ಆಕ್ಷೇಪಿಸಿದರು. 'ಲಂಚ ಕೊಟ್ಟರೆ ಮಾತ್ರ ಅನುಮೋದನೆ ನೀಡಲಾಗುತ್ತದೆ' ಎಂದು ಆರೋಪಿಸಿದರು. ಈ ಆರೋಪಕ್ಕೆ ಬಿಜೆಪಿ ಸದಸ್ಯರು ಆಕ್ಷೇಪಿಸಿದರು.</p>.<p>ಮಳವಳ್ಳಿ ತಾಲ್ಲೂಕಿನ ₹ 85 ಲಕ್ಷದ ಕಾಮಗಾರಿ ತಡೆ ಹಿಡಿದಿರುವ ಬಗ್ಗೆ ಮರಿತಿಬ್ಬೇಗೌಡ ಪ್ರಸ್ತಾಪಿಸಿದರು. ಚರ್ಚೆ ಮುಗಿಸುವಂತೆ ಮನವಿ ಮಾಡಿದ ಬೊಮ್ಮಾಯಿ, '₹ 85 ಲಕ್ಷದ ಕಾಮಗಾರಿ ಮಾಡಿಸಬೇಕಾ? ಬೇಡವಾ ' ಎಂದು ಪ್ರಶ್ನಿಸಿದರು.</p>.<p>ಸಿಟ್ಟಿಗೆದ್ದು ತಮ್ಮ ಪತ್ರವನ್ನು ಸಭಾಧ್ಯಕ್ಷರ ಪೀಠದ ಎದುರು ಪರಿಷತ್ ಸಚಿವಾಲಯದ ನಡವಳಿ ದಾಖಲಿಸುವ ಅಧಿಕಾರಿಗಳು ಕುಳಿತ ಸ್ಥಳಕ್ಕೆ ಎಸೆದ ಮರಿತಿಬ್ಬೇಗೌಡ, ಬೊಮ್ಮಾಯಿ ವಿರುದ್ಧ ವಾಗ್ದಾಳಿಗೆ ಇಳಿದರು. ಕೆಲಕಾಲ ತೀವ್ರ ವಾಕ್ಸಮರ ನಡೆಯಿತು.</p>.<p>ಮರಿತಿಬ್ಬೇಗೌಡ ಅವರನ್ನು ಅಮಾನತು ಮಾಡುವಂತೆ ಬಿಜೆಪಿಯ ಆಯನೂರು ಮಂಜುನಾಥ್ ಅವರು ಪೀಠವನ್ನು ಆಗ್ರಹಿಸಿದರು. ಸಚಿವರಾದ ಬೊಮ್ಮಾಯಿ, ಮಾಧುಸ್ವಾಮಿ ಸೇರಿದಂತೆ ಹಲವರು ಮರಿತಿಬ್ಬೇಗೌಡ ಅವರ ಅಮಾನತಿಗೆ ಪಟ್ಟು ಹಿಡಿದಿದ್ದಾರೆ.</p>.<p>'ಅವರು ವರದಿ ಕೊಡುವಾಗ ಯಾರಿಗೂ ವಿನಾಯಿತಿ ನೀಡಿಲ್ಲ. ಈ ರೀತಿಯ ವರ್ತನೆ ಸಹಿಸಲು ಸಾಧ್ಯವಿಲ್ಲ. ಅಮಾನತು ಮಾಡಲೇಬೇಕು' ಎಂದು ಮಾಧುಸ್ವಾಮಿ ಆಗ್ರಹಿಸಿದರು.</p>.<p>ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಉಪ ಸಭಾಪತಿ ಸದನದ ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ನಲ್ಲಿ ಗುರುವಾರ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪತ್ರವೊಂದನ್ನು ಸಭಾಧ್ಯಕ್ಷರ ಪೀಠದ ಎದುರಿನ ಸ್ಥಳಕ್ಕೆ ಎಸೆದಿದ್ದು, ಕೋಲಾಹಲಕ್ಕೆ ಕಾರಣವಾಗಿದೆ.</p>.<p>ಮರಿತಿಬ್ಬೇಗೌಡ ಅವರನ್ನು ಅಮಾನತು ಮಾಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದರು.</p>.<p>ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಕೈಗೊಂಡಿರುವ ಕಾಮಗಾರಿಗಳ ಕುರಿತು ಮರಿತಿಬ್ಬೇಗೌಡ ಪ್ರಶ್ನೆ ಕೇಳಿದರು. ಜಲ ಸಂಪನ್ಮೂಲ ಸಚಿವರ ಪರವಾಗಿ ಬೊಮ್ಮಾಯಿ ಉತ್ತರಿಸಿದರು.</p>.<p>ಮದ್ದೂರು ತಾಲ್ಲೂಕಿನ ಕಾಮಗಾರಿಗಳಿಗೆ ಮಾತ್ರ ಒಪ್ಪಿಗೆ ನೀಡಿರುವುದಕ್ಕೆ ಮರಿತಿಬ್ಬೇಗೌಡ ಆಕ್ಷೇಪಿಸಿದರು. 'ಲಂಚ ಕೊಟ್ಟರೆ ಮಾತ್ರ ಅನುಮೋದನೆ ನೀಡಲಾಗುತ್ತದೆ' ಎಂದು ಆರೋಪಿಸಿದರು. ಈ ಆರೋಪಕ್ಕೆ ಬಿಜೆಪಿ ಸದಸ್ಯರು ಆಕ್ಷೇಪಿಸಿದರು.</p>.<p>ಮಳವಳ್ಳಿ ತಾಲ್ಲೂಕಿನ ₹ 85 ಲಕ್ಷದ ಕಾಮಗಾರಿ ತಡೆ ಹಿಡಿದಿರುವ ಬಗ್ಗೆ ಮರಿತಿಬ್ಬೇಗೌಡ ಪ್ರಸ್ತಾಪಿಸಿದರು. ಚರ್ಚೆ ಮುಗಿಸುವಂತೆ ಮನವಿ ಮಾಡಿದ ಬೊಮ್ಮಾಯಿ, '₹ 85 ಲಕ್ಷದ ಕಾಮಗಾರಿ ಮಾಡಿಸಬೇಕಾ? ಬೇಡವಾ ' ಎಂದು ಪ್ರಶ್ನಿಸಿದರು.</p>.<p>ಸಿಟ್ಟಿಗೆದ್ದು ತಮ್ಮ ಪತ್ರವನ್ನು ಸಭಾಧ್ಯಕ್ಷರ ಪೀಠದ ಎದುರು ಪರಿಷತ್ ಸಚಿವಾಲಯದ ನಡವಳಿ ದಾಖಲಿಸುವ ಅಧಿಕಾರಿಗಳು ಕುಳಿತ ಸ್ಥಳಕ್ಕೆ ಎಸೆದ ಮರಿತಿಬ್ಬೇಗೌಡ, ಬೊಮ್ಮಾಯಿ ವಿರುದ್ಧ ವಾಗ್ದಾಳಿಗೆ ಇಳಿದರು. ಕೆಲಕಾಲ ತೀವ್ರ ವಾಕ್ಸಮರ ನಡೆಯಿತು.</p>.<p>ಮರಿತಿಬ್ಬೇಗೌಡ ಅವರನ್ನು ಅಮಾನತು ಮಾಡುವಂತೆ ಬಿಜೆಪಿಯ ಆಯನೂರು ಮಂಜುನಾಥ್ ಅವರು ಪೀಠವನ್ನು ಆಗ್ರಹಿಸಿದರು. ಸಚಿವರಾದ ಬೊಮ್ಮಾಯಿ, ಮಾಧುಸ್ವಾಮಿ ಸೇರಿದಂತೆ ಹಲವರು ಮರಿತಿಬ್ಬೇಗೌಡ ಅವರ ಅಮಾನತಿಗೆ ಪಟ್ಟು ಹಿಡಿದಿದ್ದಾರೆ.</p>.<p>'ಅವರು ವರದಿ ಕೊಡುವಾಗ ಯಾರಿಗೂ ವಿನಾಯಿತಿ ನೀಡಿಲ್ಲ. ಈ ರೀತಿಯ ವರ್ತನೆ ಸಹಿಸಲು ಸಾಧ್ಯವಿಲ್ಲ. ಅಮಾನತು ಮಾಡಲೇಬೇಕು' ಎಂದು ಮಾಧುಸ್ವಾಮಿ ಆಗ್ರಹಿಸಿದರು.</p>.<p>ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಉಪ ಸಭಾಪತಿ ಸದನದ ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>