ಪ್ರಾರ್ಥಿವ ಶರೀರವನ್ನು ರಾಹುಲ್ ಅವರ ಮನೆಗೆ ತಂದಾಗ, ಅವರ ತಂದೆ, ತಾಯಿ, ತಂಗಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮದ ರುದ್ರಭೂಮಿಯಲ್ಲಿ ಮರಾಠಾ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡ ಸಂಜಯ ಪಾಟೀಲ ಇತರರು ಪಾಲ್ಗೊಂಡಿದ್ದರು.