<p><strong>ರಾಯಚೂರು:</strong> ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆಗೆ ಅಡ್ಡಿಯಾಗಿದ್ದ, ಹೈಕೋರ್ಟ್ನಲ್ಲಿ ದಾಖಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ವಾಪಸ್ ಪಡೆದಿದ್ದಾರೆ.</p>.<p>ಇದರಿಂದ ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುವುದು ಸನ್ನಿಹಿತವಾಗಿದ್ದು, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾರ್ಗ ಸುಗಮವಾದಂತಾಗಿದೆ.</p>.<p>2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದರು. ‘ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕೆದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು’ಎಂದು ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಹೈಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾಗದ ಕಾರಣ ಈ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿರಲಿಲ್ಲ. ಬಿಜೆಪಿಯಿಂದ ಸ್ಪರ್ಧಿಸಲು ಪ್ರತಾಪಗೌಡ ಅವರ ಹಾದಿ ಸುಗಮ ಮಾಡಿಕೊಡಲು ಬಸನಗೌಡ ಅವರನ್ನು ರಾಜ್ಯ ಸರ್ಕಾರ ತುಂಗಭದ್ರಾ ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿತ್ತು. ವಿಳಂಬವಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಈಚೆಗಷ್ಟೇ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯ ಫಲಿತಾಂಶದ ನಂತರ ಮನಸ್ಸು ಬದಲಿಸಿದ್ದಾರೆ.</p>.<p>‘ಪಕ್ಷದ ವರಿಷ್ಠರ ಸೂಚನೆಯಂತೆ ತಕರಾರು ಅರ್ಜಿ ವಾಪಸ್ ಪಡೆದಿದ್ದೇನೆ. ಯಾವುದೇ ಷರತ್ತು ವಿಧಿಸಿಲ್ಲ. ನನಗೆ ಪಕ್ಷದ ಹಿತ ಮುಖ್ಯ’ ಎಂದುಬಸನಗೌಡ ಪ್ರತಿಕ್ರಿಯಿಸಿದರು.</p>.<p>‘ಇದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗುವ ನಿರೀಕ್ಷೆ ಇದೆ’ ಎಂದು ಅನರ್ಹ ಶಾಸಕಪ್ರತಾಪಗೌಡ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆಗೆ ಅಡ್ಡಿಯಾಗಿದ್ದ, ಹೈಕೋರ್ಟ್ನಲ್ಲಿ ದಾಖಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ವಾಪಸ್ ಪಡೆದಿದ್ದಾರೆ.</p>.<p>ಇದರಿಂದ ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುವುದು ಸನ್ನಿಹಿತವಾಗಿದ್ದು, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾರ್ಗ ಸುಗಮವಾದಂತಾಗಿದೆ.</p>.<p>2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದರು. ‘ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕೆದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು’ಎಂದು ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಹೈಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾಗದ ಕಾರಣ ಈ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿರಲಿಲ್ಲ. ಬಿಜೆಪಿಯಿಂದ ಸ್ಪರ್ಧಿಸಲು ಪ್ರತಾಪಗೌಡ ಅವರ ಹಾದಿ ಸುಗಮ ಮಾಡಿಕೊಡಲು ಬಸನಗೌಡ ಅವರನ್ನು ರಾಜ್ಯ ಸರ್ಕಾರ ತುಂಗಭದ್ರಾ ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿತ್ತು. ವಿಳಂಬವಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಈಚೆಗಷ್ಟೇ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯ ಫಲಿತಾಂಶದ ನಂತರ ಮನಸ್ಸು ಬದಲಿಸಿದ್ದಾರೆ.</p>.<p>‘ಪಕ್ಷದ ವರಿಷ್ಠರ ಸೂಚನೆಯಂತೆ ತಕರಾರು ಅರ್ಜಿ ವಾಪಸ್ ಪಡೆದಿದ್ದೇನೆ. ಯಾವುದೇ ಷರತ್ತು ವಿಧಿಸಿಲ್ಲ. ನನಗೆ ಪಕ್ಷದ ಹಿತ ಮುಖ್ಯ’ ಎಂದುಬಸನಗೌಡ ಪ್ರತಿಕ್ರಿಯಿಸಿದರು.</p>.<p>‘ಇದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗುವ ನಿರೀಕ್ಷೆ ಇದೆ’ ಎಂದು ಅನರ್ಹ ಶಾಸಕಪ್ರತಾಪಗೌಡ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>