ಹೈಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾಗದ ಕಾರಣ ಈ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿರಲಿಲ್ಲ. ಬಿಜೆಪಿಯಿಂದ ಸ್ಪರ್ಧಿಸಲು ಪ್ರತಾಪಗೌಡ ಅವರ ಹಾದಿ ಸುಗಮ ಮಾಡಿಕೊಡಲು ಬಸನಗೌಡ ಅವರನ್ನು ರಾಜ್ಯ ಸರ್ಕಾರ ತುಂಗಭದ್ರಾ ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿತ್ತು. ವಿಳಂಬವಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಈಚೆಗಷ್ಟೇ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯ ಫಲಿತಾಂಶದ ನಂತರ ಮನಸ್ಸು ಬದಲಿಸಿದ್ದಾರೆ.