'ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿದಾಗ್ಯೂ ಜನರು ಬೆಲೆ ಕೊಟ್ಟಿಲ್ಲ. ನಿರೀಕ್ಷಿತ ಮತಗಟ್ಟೆಯಲ್ಲೂ ಬಿಜೆಪಿಗೆ ಮತಗಳು ಬಂದಿಲ್ಲ' ಎಂದು ಪ್ರತಾಪಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋಲಿಗೆ ಏನು ಕಾರಣ ಎಂಬುದು ಆನಂತರ ಪಕ್ಷದ ಹಿರಿಯರು ಕುರಿತು ಚರ್ಚಿಸಲಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ' ಎಂದರು.