ಬದಲಾದ ರಾಜಕೀಯ ಸ್ಥಿತಿಯಲ್ಲಿ ಪ್ರತಾಪಗೌಡ ಬಿಜೆಪಿ ಸೇರಿದ್ದರಿಂದ ಬಿಜೆಪಿ ಮುಖಂಡರು ಬಸನಗೌಡರಿಗೆ ಟಿಎಲ್ಬಿಸಿ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದರು. ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ವಿಚಾರಣೆಯಲ್ಲಿ ಇದ್ದ ಕಾರಣ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿಲ್ಲ. ಬಿಜೆಪಿ ಮುಖಂಡರು ಬಸನಗೌಡರ ಮನವೊಲಿಸಿ ಚುನಾವಣಾ ತಕರಾರು ಅರ್ಜಿ ವಾಪಸ್ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ತಮಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಮನವರಿಕೆಯಾಗುತ್ತಿದ್ದಂತೆ ಬಸನಗೌಡರು ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದರು.