<p><strong>ಮ</strong>ಸ್ಕಿ: ‘ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ಸಂಚಾರದಿಂದ ಉಂಟಾಗಿರುವ ಬಿಜೆಪಿಯಲ್ಲಿನ ಗೊಂದಲಕ್ಕೂ ಹಾಗೂ ಕಾಂಗ್ರೆಸ್ಗೂ ಯಾವುದೇ ಸಂಬಂಧ ಇಲ್ಲ’ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಹೇಳಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಚೆಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನ ಅಸಮಾಧಾನಿತರ ಗುಂಪು ರಾಮುಲು ಅವರನ್ನು ಭೇಟಿಯಾಗಿದೆ. ಅವರೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.</p>.<p>ಕಾಂಗ್ರೆಸ್ನಲ್ಲಿ ಕೆಲವರು ರಾಮುಲು ಅವರ ಮೇಲಿನ ಅಭಿಮಾನದಿಂದಲೋ ಅಥವಾ ಸಮುದಾಯದ ನಾಯಕ ಎಂದೋ ಭೇಟಿ ಆಗಿರಬಹುದು ಎಂದು ಹೇಳಿದ್ದಾರೆ. ಇದಕ್ಕೂ, ಕಾಂಗ್ರೆಸ್ಗೂ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾಗಲಿ ಅದು ಅವರ ಆಂತರಿಕ ವಿಚಾರ. ನಮ್ಮ ಪಕ್ಷ ಹಾಗೂ ನಮ್ಮ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಗಮನ ಕೊಟ್ಟಿದ್ದಾರೆ. ರೈತರಿಗೆ ಕೊಟ್ಟ ಮಾತಿನಂತೆ ನಾರಾಯಣಪುರ ಬಲದಂಡೆಯ 5 (ಎ) ಕಾಲುವೆ ಯೋಜನೆ ಜಾರಿಗೆ ತಂದು ಈಗ ಟೆಂಡರ್ ಕರೆಯಲಾಗಿದೆ. ಪಟ್ಟಣದ ಸೋಮನಾಥನಗರದ ನಿವಾಸಿಗಳಿಗೆ ಶೀಘ್ರ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-32-1906513252</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮ</strong>ಸ್ಕಿ: ‘ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ಸಂಚಾರದಿಂದ ಉಂಟಾಗಿರುವ ಬಿಜೆಪಿಯಲ್ಲಿನ ಗೊಂದಲಕ್ಕೂ ಹಾಗೂ ಕಾಂಗ್ರೆಸ್ಗೂ ಯಾವುದೇ ಸಂಬಂಧ ಇಲ್ಲ’ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಹೇಳಿದ್ದಾರೆ.</p>.<p>ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಚೆಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನ ಅಸಮಾಧಾನಿತರ ಗುಂಪು ರಾಮುಲು ಅವರನ್ನು ಭೇಟಿಯಾಗಿದೆ. ಅವರೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.</p>.<p>ಕಾಂಗ್ರೆಸ್ನಲ್ಲಿ ಕೆಲವರು ರಾಮುಲು ಅವರ ಮೇಲಿನ ಅಭಿಮಾನದಿಂದಲೋ ಅಥವಾ ಸಮುದಾಯದ ನಾಯಕ ಎಂದೋ ಭೇಟಿ ಆಗಿರಬಹುದು ಎಂದು ಹೇಳಿದ್ದಾರೆ. ಇದಕ್ಕೂ, ಕಾಂಗ್ರೆಸ್ಗೂ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾಗಲಿ ಅದು ಅವರ ಆಂತರಿಕ ವಿಚಾರ. ನಮ್ಮ ಪಕ್ಷ ಹಾಗೂ ನಮ್ಮ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಗಮನ ಕೊಟ್ಟಿದ್ದಾರೆ. ರೈತರಿಗೆ ಕೊಟ್ಟ ಮಾತಿನಂತೆ ನಾರಾಯಣಪುರ ಬಲದಂಡೆಯ 5 (ಎ) ಕಾಲುವೆ ಯೋಜನೆ ಜಾರಿಗೆ ತಂದು ಈಗ ಟೆಂಡರ್ ಕರೆಯಲಾಗಿದೆ. ಪಟ್ಟಣದ ಸೋಮನಾಥನಗರದ ನಿವಾಸಿಗಳಿಗೆ ಶೀಘ್ರ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-32-1906513252</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>