<p><strong>ನವದೆಹಲಿ:</strong> ಗರ್ಭಿಣಿಯರ ಮತ್ತು ನವಜಾತ ಶಿಶುವಿನ ಅಪೌಷ್ಟಿಕತೆ ನಿವಾರಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಮಾತೃ ವಂದನ’ ಯೋಜನೆಗೆ ಅಗತ್ಯವಿರುವ ಅನುದಾನ ಒದಗಿಸುವಂತೆ ಕಾಂಗ್ರೆಸ್ ಸದಸ್ಯ ಡಾ.ಎಲ್. ಹನುಮಂತಯ್ಯ ಆಗ್ರಹಿಸಿದರು.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇಶದ ಬಹುಪಾಲು ಗರ್ಭಿಣಿಯರಿಗೆ ಹೆರಿಗೆ ಪ್ರಯೋಜನ ಕಾಯ್ದೆಯಡಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.</p>.<p>ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ–2013ರ ಅಡಿ ಗರ್ಭಿಣಿಯರು ಮತ್ತು ನವಜಾತ ಶಿಶುವಿಗೆ ಮಾಸಿಕ ₹ 6,000 ನೀಡುವುದಾಗಿ 2016ರ ಡಿಸೆಂಬರ್ನಲ್ಲಿ ಪ್ರಧಾನಿ ಅವರೇ ಘೋಷಿಸಿದ್ದಾರೆ. ಆದರೂ, ಕೇಂದ್ರ ಸರ್ಕಾರ ಯೋಜನೆಯನ್ನು<br />ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದರು.</p>.<p>ಯೋಜನೆ ಕಾರ್ಯಗತಗೊಳಿಸಲು ವಾರ್ಷಿಕ ಕನಿಷ್ಠ ₹ 15,000 ಕೋಟಿ ಒದಗಿಸುವ ಅಗತ್ಯವಿದ್ದರೂ, ಕೇಂದ್ರ ಸರ್ಕಾರ 2017–18 ನೇ ಸಾಲಿನ ಬಜೆಟ್ನಲ್ಲಿ ಕೇವಲ ₹ 2,700 ಕೋಟಿ ಮೀಸಲಿರಿಸಿತ್ತು. ಅದರಲ್ಲಿ ₹ 2,000 ಕೋಟಿ ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಛತ್ತೀಸ್ಗಡ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ ಮತ್ತು ಉತ್ತರ ಪ್ರದೇಶಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಕೇವಲ ಶೇ 31ರಷ್ಟು ಗರ್ಭಿಣಿಯರು ಹೆಚ್ಚುವರಿ ಪೌಷ್ಟಿಕ ಆಹಾರ ಸೇವಿಸಿದ್ದಾರೆ ಎಂಬ ಅಂಶ ಬಹಿರಂಗಗೊಂಡಿದೆ ಎಂದು ಅವರು ವಿವರಿಸಿದರು.</p>.<p>ತಮಿಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿನ ಶೇ 75ರಷ್ಟು ಗರ್ಭಿಣಿಯರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ದೇಶದ ಮೂವರು ಮಕ್ಕಳಲ್ಲಿ ಇಬ್ಬರು ಅಪೌಷ್ಟಿಕತೆಯ ಕಾರಣದಿಂದ ಸಾವಿಗೀಡಾಗುತ್ತಿರುವುದು ವಿಷಾದನೀಯ. ಕೇಂದ್ರವು ಕೂಡಲೇ ಯೋಜನೆಯ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗರ್ಭಿಣಿಯರ ಮತ್ತು ನವಜಾತ ಶಿಶುವಿನ ಅಪೌಷ್ಟಿಕತೆ ನಿವಾರಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಮಾತೃ ವಂದನ’ ಯೋಜನೆಗೆ ಅಗತ್ಯವಿರುವ ಅನುದಾನ ಒದಗಿಸುವಂತೆ ಕಾಂಗ್ರೆಸ್ ಸದಸ್ಯ ಡಾ.ಎಲ್. ಹನುಮಂತಯ್ಯ ಆಗ್ರಹಿಸಿದರು.</p>.<p>ರಾಜ್ಯಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇಶದ ಬಹುಪಾಲು ಗರ್ಭಿಣಿಯರಿಗೆ ಹೆರಿಗೆ ಪ್ರಯೋಜನ ಕಾಯ್ದೆಯಡಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.</p>.<p>ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ–2013ರ ಅಡಿ ಗರ್ಭಿಣಿಯರು ಮತ್ತು ನವಜಾತ ಶಿಶುವಿಗೆ ಮಾಸಿಕ ₹ 6,000 ನೀಡುವುದಾಗಿ 2016ರ ಡಿಸೆಂಬರ್ನಲ್ಲಿ ಪ್ರಧಾನಿ ಅವರೇ ಘೋಷಿಸಿದ್ದಾರೆ. ಆದರೂ, ಕೇಂದ್ರ ಸರ್ಕಾರ ಯೋಜನೆಯನ್ನು<br />ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದರು.</p>.<p>ಯೋಜನೆ ಕಾರ್ಯಗತಗೊಳಿಸಲು ವಾರ್ಷಿಕ ಕನಿಷ್ಠ ₹ 15,000 ಕೋಟಿ ಒದಗಿಸುವ ಅಗತ್ಯವಿದ್ದರೂ, ಕೇಂದ್ರ ಸರ್ಕಾರ 2017–18 ನೇ ಸಾಲಿನ ಬಜೆಟ್ನಲ್ಲಿ ಕೇವಲ ₹ 2,700 ಕೋಟಿ ಮೀಸಲಿರಿಸಿತ್ತು. ಅದರಲ್ಲಿ ₹ 2,000 ಕೋಟಿ ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಛತ್ತೀಸ್ಗಡ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ ಮತ್ತು ಉತ್ತರ ಪ್ರದೇಶಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಕೇವಲ ಶೇ 31ರಷ್ಟು ಗರ್ಭಿಣಿಯರು ಹೆಚ್ಚುವರಿ ಪೌಷ್ಟಿಕ ಆಹಾರ ಸೇವಿಸಿದ್ದಾರೆ ಎಂಬ ಅಂಶ ಬಹಿರಂಗಗೊಂಡಿದೆ ಎಂದು ಅವರು ವಿವರಿಸಿದರು.</p>.<p>ತಮಿಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿನ ಶೇ 75ರಷ್ಟು ಗರ್ಭಿಣಿಯರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ದೇಶದ ಮೂವರು ಮಕ್ಕಳಲ್ಲಿ ಇಬ್ಬರು ಅಪೌಷ್ಟಿಕತೆಯ ಕಾರಣದಿಂದ ಸಾವಿಗೀಡಾಗುತ್ತಿರುವುದು ವಿಷಾದನೀಯ. ಕೇಂದ್ರವು ಕೂಡಲೇ ಯೋಜನೆಯ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>