ಸೋಂಕು ದೃಢಪಟ್ಟವರನ್ನು ಕೋವಿಡ್– 19 ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ರವಾನಿಸಲು ಎರಡು ಮೂರು ದಿನ ತಗಲುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳು ಹಾಗೂ ವೆಂಟಿಲೇಟರ್ಗಳ ಕೊರತೆ ಇದೆ. ತುರ್ತು ನಿಗಾ ಘಟಕಗಳು ಭರ್ತಿಯಾಗಿವೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಪೂರೈಸುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿಲ್ಲ. ಈ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂಬ ದೂರುಗಳೂ ಇವೆ. ಮತ್ತೊಂದೆಡೆ, ಮುಂಜಾಗ್ರತೆಯ ಕೊರತೆಯಿಂದಾಗಿ ನಗರದಲ್ಲಿ ಕೊರೊನಾ ಪ್ರಕರಣಗಳು ಒಂದೇ ಸಮನೆ ಹೆಚ್ಚುತ್ತಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವವರು ಯಾರು. ಇದಕ್ಕೆ ಮೇಯರ್ ಉತ್ತರ ಕೊಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.