<p><strong>ಬೆಂಗಳೂರು:</strong> ‘ಸತೀಶ ಜಾರಕಿಹೊಳಿ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಅಹಿಂದ ಸಚಿವರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಆಪ್ತ ಸಚಿವರ ಸಭೆ ಎಂದು ಅಲ್ಲ, ಅಹಿಂದ ಸಚಿವರೂ ಇದ್ದರು. ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿರುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ನಾಳೆ ನಾವು, ಲಿಂಗಾಯತ ಶಾಸಕರು ಸಭೆ ಸೇರುತ್ತೇವೆ. ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಅದನ್ನು ತಪ್ಪು ಎನ್ನಲು ಆಗುತ್ತದೆಯೇ? ಒಕ್ಕಲಿಗ ನಾಯಕರೂ ಕೂಡ ಅವರ ಸಮಸ್ಯೆಗಳ ಚರ್ಚೆಗೆ ಸೇರಿರುತ್ತಾರೆ. ಅದಕ್ಕೆ ಬೇರೆ ಅರ್ಥ ಏಕೆ’ ಎಂದೂ ಕೇಳಿದರು.</p>.<p><strong>ವಿಪಕ್ಷಗಳು ರಾಜಕೀಯ ಮಾಡುತ್ತಿವೆ:</strong> ‘ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಮುಂದಿಟ್ಟು ಬಿಜೆಪಿಯವರು ಪ್ರಿಯಾಂಕ್ ಖರ್ಗೆ ವಿರುದ್ಧ ಯಾಕೆ ಪ್ರತಿಭಟನೆ ಮಾಡಬೇಕು? ಆತ್ಮಹತ್ಯೆಗೂ ಪ್ರಿಯಾಂಕ್ ಅವರಿಗೂ ಏನು ಸಂಬಂಧ? ಪ್ರಕರಣದ ತನಿಖೆ ನಡೆಯುತ್ತಿದೆ. ಸತ್ಯ ಹೊರಬರಲಿದೆ. ವಿಪಕ್ಷಗಳು ಸುಮ್ಮನೆ ರಾಜಕೀಯ ಮಾಡುತ್ತಿವೆ’ ಎಂದರು.</p>.<p>ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ನೀಡಿದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪಾಟೀಲ, ‘ಆ ಬಗ್ಗೆ ನನಗೆ ಗೊತ್ತಿಲ್ಲ. ಅದು ಮುಖ್ಯಮಂತ್ರಿಯ ಪರಮಾಧಿಕಾರ. ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸುತ್ತಾರೆ’ ಎಂದರು.</p>.<p> <strong>‘ಹೈಕಮಾಂಡ್ ಹೇಳಿದರೆ ಡಿಕೆಶಿ ಮುಂದುವರಿಯಲಿ’</strong> </p><p>‘ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ. ಹೈಕಮಾಂಡ್ ಹೇಳಿದರೆ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಚಿವ ಸ್ಥಾನ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಏನೇ ಆದರೂ ಎಲ್ಲವೂ ಹೈಕಮಾಂಡ್ಗೆ ಬಿಟ್ಟಿದ್ದು. ಬದಲಾವಣೆ ಮಾಡುವುದು ಬಿಡುವುದು ವರಿಷ್ಠರ ತೀರ್ಮಾನ. ನನಗಂತೂ ಯಾವ ಹುದ್ದೆಯೂ ಬೇಡ. ಬೇಕಿದ್ದರೆ ಮಂತ್ರಿ ಸ್ಥಾನವೂ ಬೇಡ’ ಎಂದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ‘ಒಬ್ಬರಿಗೆ ಒಂದೇ ಹುದ್ದೆ ಎಂಬ ಚರ್ಚೆ ಎಲ್ಲ ಕಾಲದಲ್ಲಿಯೂ ಇದೆ. ದೇವರಾಜ ಅರಸು ಕಾಲದಲ್ಲಿಯೂ ಕೂಡ ಒಬ್ಬರಿಗೆ ಒಂದೇ ಹುದ್ದೆ ಎಂದಿತ್ತು. ದೇವರಾಜ ಅರಸು ಎರಡರಲ್ಲೂ ಮುಂದುವರಿಯುತ್ತೇನೆ ಎಂದಾಗ ಅವರನ್ನೇ ಪಕ್ಷ ತೆಗೆದುಬಿಟ್ಟಿತ್ತು’ ಎಂದರು. ‘ಮುಖ್ಯಮಂತ್ರಿಯವರೂ ಭಾಗವಹಿಸಿದ್ದ ಔತಣಕೂಟದಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆ ಆಗಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದರು. </p>.<p><strong>‘ರಾಜಕೀಯ ಮಹತ್ವ ನೀಡುವ ಅಗತ್ಯ ಇಲ್ಲ</strong></p><p>’ ‘ಔತಣಕೂಟದಲ್ಲಿ ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಸೇರಿದಂತೆ ಯಾವ ವಿಷಯದ ಬಗ್ಗೆಯೂ ಚರ್ಚೆ ಮಾಡಿಲ್ಲ. ಇದಕ್ಕೆ ರಾಜಕೀಯ ಮಹತ್ವ ನೀಡುವ ಅಗತ್ಯ ಇಲ್ಲ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರರು ‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿದ ಆರೋಪದ ಪ್ರಕರಣದಲ್ಲಿ ಸಭಾಪತಿ ಅನುಮತಿ ನೀಡಿದರೆ ಮಾತ್ರ ಸದನದೊಳಗೆ ಹೋಗಿ ಮಹಜರು ನಡೆಸಲು ಸಾಧ್ಯ. ಪ್ರಕರಣದ ಸ್ವರೂಪ ಯಾವ ರೀತಿಯದ್ದು ಎಂಬುದನ್ನು ಪರಿಶೀಲಿಸಿ ಸಭಾಪತಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸತೀಶ ಜಾರಕಿಹೊಳಿ ಮನೆಯಲ್ಲಿ ನಡೆದ ಔತಣಕೂಟದಲ್ಲಿ ಅಹಿಂದ ಸಚಿವರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಆಪ್ತ ಸಚಿವರ ಸಭೆ ಎಂದು ಅಲ್ಲ, ಅಹಿಂದ ಸಚಿವರೂ ಇದ್ದರು. ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿರುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ನಾಳೆ ನಾವು, ಲಿಂಗಾಯತ ಶಾಸಕರು ಸಭೆ ಸೇರುತ್ತೇವೆ. ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಅದನ್ನು ತಪ್ಪು ಎನ್ನಲು ಆಗುತ್ತದೆಯೇ? ಒಕ್ಕಲಿಗ ನಾಯಕರೂ ಕೂಡ ಅವರ ಸಮಸ್ಯೆಗಳ ಚರ್ಚೆಗೆ ಸೇರಿರುತ್ತಾರೆ. ಅದಕ್ಕೆ ಬೇರೆ ಅರ್ಥ ಏಕೆ’ ಎಂದೂ ಕೇಳಿದರು.</p>.<p><strong>ವಿಪಕ್ಷಗಳು ರಾಜಕೀಯ ಮಾಡುತ್ತಿವೆ:</strong> ‘ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಮುಂದಿಟ್ಟು ಬಿಜೆಪಿಯವರು ಪ್ರಿಯಾಂಕ್ ಖರ್ಗೆ ವಿರುದ್ಧ ಯಾಕೆ ಪ್ರತಿಭಟನೆ ಮಾಡಬೇಕು? ಆತ್ಮಹತ್ಯೆಗೂ ಪ್ರಿಯಾಂಕ್ ಅವರಿಗೂ ಏನು ಸಂಬಂಧ? ಪ್ರಕರಣದ ತನಿಖೆ ನಡೆಯುತ್ತಿದೆ. ಸತ್ಯ ಹೊರಬರಲಿದೆ. ವಿಪಕ್ಷಗಳು ಸುಮ್ಮನೆ ರಾಜಕೀಯ ಮಾಡುತ್ತಿವೆ’ ಎಂದರು.</p>.<p>ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ನೀಡಿದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪಾಟೀಲ, ‘ಆ ಬಗ್ಗೆ ನನಗೆ ಗೊತ್ತಿಲ್ಲ. ಅದು ಮುಖ್ಯಮಂತ್ರಿಯ ಪರಮಾಧಿಕಾರ. ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸುತ್ತಾರೆ’ ಎಂದರು.</p>.<p> <strong>‘ಹೈಕಮಾಂಡ್ ಹೇಳಿದರೆ ಡಿಕೆಶಿ ಮುಂದುವರಿಯಲಿ’</strong> </p><p>‘ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ. ಹೈಕಮಾಂಡ್ ಹೇಳಿದರೆ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಚಿವ ಸ್ಥಾನ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಏನೇ ಆದರೂ ಎಲ್ಲವೂ ಹೈಕಮಾಂಡ್ಗೆ ಬಿಟ್ಟಿದ್ದು. ಬದಲಾವಣೆ ಮಾಡುವುದು ಬಿಡುವುದು ವರಿಷ್ಠರ ತೀರ್ಮಾನ. ನನಗಂತೂ ಯಾವ ಹುದ್ದೆಯೂ ಬೇಡ. ಬೇಕಿದ್ದರೆ ಮಂತ್ರಿ ಸ್ಥಾನವೂ ಬೇಡ’ ಎಂದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ‘ಒಬ್ಬರಿಗೆ ಒಂದೇ ಹುದ್ದೆ ಎಂಬ ಚರ್ಚೆ ಎಲ್ಲ ಕಾಲದಲ್ಲಿಯೂ ಇದೆ. ದೇವರಾಜ ಅರಸು ಕಾಲದಲ್ಲಿಯೂ ಕೂಡ ಒಬ್ಬರಿಗೆ ಒಂದೇ ಹುದ್ದೆ ಎಂದಿತ್ತು. ದೇವರಾಜ ಅರಸು ಎರಡರಲ್ಲೂ ಮುಂದುವರಿಯುತ್ತೇನೆ ಎಂದಾಗ ಅವರನ್ನೇ ಪಕ್ಷ ತೆಗೆದುಬಿಟ್ಟಿತ್ತು’ ಎಂದರು. ‘ಮುಖ್ಯಮಂತ್ರಿಯವರೂ ಭಾಗವಹಿಸಿದ್ದ ಔತಣಕೂಟದಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆ ಆಗಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದರು. </p>.<p><strong>‘ರಾಜಕೀಯ ಮಹತ್ವ ನೀಡುವ ಅಗತ್ಯ ಇಲ್ಲ</strong></p><p>’ ‘ಔತಣಕೂಟದಲ್ಲಿ ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಸೇರಿದಂತೆ ಯಾವ ವಿಷಯದ ಬಗ್ಗೆಯೂ ಚರ್ಚೆ ಮಾಡಿಲ್ಲ. ಇದಕ್ಕೆ ರಾಜಕೀಯ ಮಹತ್ವ ನೀಡುವ ಅಗತ್ಯ ಇಲ್ಲ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರರು ‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿದ ಆರೋಪದ ಪ್ರಕರಣದಲ್ಲಿ ಸಭಾಪತಿ ಅನುಮತಿ ನೀಡಿದರೆ ಮಾತ್ರ ಸದನದೊಳಗೆ ಹೋಗಿ ಮಹಜರು ನಡೆಸಲು ಸಾಧ್ಯ. ಪ್ರಕರಣದ ಸ್ವರೂಪ ಯಾವ ರೀತಿಯದ್ದು ಎಂಬುದನ್ನು ಪರಿಶೀಲಿಸಿ ಸಭಾಪತಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>