<p><strong>ಬೆಂಗಳೂರು:</strong> ‘ಕೈಗಾರಿಕಾ ಪ್ರದೇಶಗಳಿಗೆ ನದಿಗಳಿಂದ ನೀರು ಪೂರೈಸುವ ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ಈ ಕೆಲಸವನ್ನು ಒಂದೂವರೆ ವರ್ಷದಲ್ಲಿ ಪೂರೈಸಬೇಕು’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೂಚಿಸಿದರು.</p>.<p>ಖನಿಜ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶಗಳಲ್ಲಿ ಪರಿಶಿಷ್ಟ ಸಮುದಾಯದ ಉದ್ಯಮಿಗಳಿಗೆ ಶೇ 75ರಷ್ಟು ಸಬ್ಸಿಡಿ ದರದಲ್ಲಿ ನಿವೇಶನ ನೀಡಲಾಗುತ್ತಿದ್ದು, ಇದರ ಬಾಕಿ ₹938 ಕೋಟಿ ಇಲಾಖೆಗೆ ಬರಬೇಕಾಗಿದೆ. ಹಣಕಾಸು ಇಲಾಖೆ ಜತೆ ಚರ್ಚಿಸಿ, ಹಣ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹುಬ್ಬಳ್ಳಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಎನ್ಜಿಇಎಫ್ ಕಾರ್ಖಾನೆಯಿಂದ ರಾಜ್ಯದ ವಿದ್ಯುತ್ ನಿಗಮಗಳು ಖರೀದಿಸಿರುವ ವಿದ್ಯುತ್ ಪರಿವರ್ತಕಗಳ ಬಾಕಿ ₹8 ಕೋಟಿಯನ್ನು ತಕ್ಷಣವೇ ಪಾವತಿಸಬೇಕು. ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂಗಳು ತಲಾ ₹2 ಕೋಟಿ ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರ ನಿರ್ಧರಿಸಿದ್ದು, ಬಾಕಿ ವಸೂಲಾತಿಯೇ ಸಮಸ್ಯೆಯಾಗಿದೆ ಎಂದರು.</p>.<p>ಕಾರ್ಖಾನೆ ಅತ್ಯುತ್ಕೃಷ್ಟ ಗುಣಮಟ್ಟದ ವಿದ್ಯುತ್ ಪರಿವರ್ತಕಗಳ ತಯಾರಿಕೆಗೆ ಹೆಸರಾಗಿದೆ. ನೂತನ ಸಂಸತ್ ಭವನದಲ್ಲೂ ಇಲ್ಲಿಯ ಪರಿವರ್ತಕಗಳೇ ಇವೆ. ರೈಲ್ವೆ ಇಲಾಖೆ ಕೂಡ ಖರೀದಿಸುತ್ತದೆ. ಆಫ್ರಿಕಾದ ಉಗಾಂಡಾ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.</p>.<div><blockquote>ಕೈಗಾರಿಕಾ ಕಟ್ಟಡದ ಸುತ್ತ ಸುರಕ್ಷತಾ ದೃಷ್ಟಿಯಿಂದ 6-7 ಮೀಟರ್ ಜಾಗ ಬಿಡಬೇಕು ಎನ್ನುವ ನಿಯಮವನ್ನು ಸಡಿಲಿಸುವ ಚಿಂತನೆ ಇದೆ.</blockquote><span class="attribution">ಎಂ.ಬಿ.ಪಾಟೀಲ, ಕೈಗಾರಿಕಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೈಗಾರಿಕಾ ಪ್ರದೇಶಗಳಿಗೆ ನದಿಗಳಿಂದ ನೀರು ಪೂರೈಸುವ ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ಈ ಕೆಲಸವನ್ನು ಒಂದೂವರೆ ವರ್ಷದಲ್ಲಿ ಪೂರೈಸಬೇಕು’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೂಚಿಸಿದರು.</p>.<p>ಖನಿಜ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶಗಳಲ್ಲಿ ಪರಿಶಿಷ್ಟ ಸಮುದಾಯದ ಉದ್ಯಮಿಗಳಿಗೆ ಶೇ 75ರಷ್ಟು ಸಬ್ಸಿಡಿ ದರದಲ್ಲಿ ನಿವೇಶನ ನೀಡಲಾಗುತ್ತಿದ್ದು, ಇದರ ಬಾಕಿ ₹938 ಕೋಟಿ ಇಲಾಖೆಗೆ ಬರಬೇಕಾಗಿದೆ. ಹಣಕಾಸು ಇಲಾಖೆ ಜತೆ ಚರ್ಚಿಸಿ, ಹಣ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹುಬ್ಬಳ್ಳಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಎನ್ಜಿಇಎಫ್ ಕಾರ್ಖಾನೆಯಿಂದ ರಾಜ್ಯದ ವಿದ್ಯುತ್ ನಿಗಮಗಳು ಖರೀದಿಸಿರುವ ವಿದ್ಯುತ್ ಪರಿವರ್ತಕಗಳ ಬಾಕಿ ₹8 ಕೋಟಿಯನ್ನು ತಕ್ಷಣವೇ ಪಾವತಿಸಬೇಕು. ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂಗಳು ತಲಾ ₹2 ಕೋಟಿ ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರ ನಿರ್ಧರಿಸಿದ್ದು, ಬಾಕಿ ವಸೂಲಾತಿಯೇ ಸಮಸ್ಯೆಯಾಗಿದೆ ಎಂದರು.</p>.<p>ಕಾರ್ಖಾನೆ ಅತ್ಯುತ್ಕೃಷ್ಟ ಗುಣಮಟ್ಟದ ವಿದ್ಯುತ್ ಪರಿವರ್ತಕಗಳ ತಯಾರಿಕೆಗೆ ಹೆಸರಾಗಿದೆ. ನೂತನ ಸಂಸತ್ ಭವನದಲ್ಲೂ ಇಲ್ಲಿಯ ಪರಿವರ್ತಕಗಳೇ ಇವೆ. ರೈಲ್ವೆ ಇಲಾಖೆ ಕೂಡ ಖರೀದಿಸುತ್ತದೆ. ಆಫ್ರಿಕಾದ ಉಗಾಂಡಾ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.</p>.<div><blockquote>ಕೈಗಾರಿಕಾ ಕಟ್ಟಡದ ಸುತ್ತ ಸುರಕ್ಷತಾ ದೃಷ್ಟಿಯಿಂದ 6-7 ಮೀಟರ್ ಜಾಗ ಬಿಡಬೇಕು ಎನ್ನುವ ನಿಯಮವನ್ನು ಸಡಿಲಿಸುವ ಚಿಂತನೆ ಇದೆ.</blockquote><span class="attribution">ಎಂ.ಬಿ.ಪಾಟೀಲ, ಕೈಗಾರಿಕಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>