<p><strong>ಬೆಂಗಳೂರು:</strong> ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್ ಸಿಟಿ) ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಚಾಲನೆ ನೀಡಲಿದ್ದಾರೆ.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರೂ ಭಾಗವಹಿಸಲಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>‘ದಾಬಸ್ಪೇಟೆ-ದೊಡ್ಡಬಳ್ಳಾಪುರ ನಡುವೆ ಸ್ಯಾಟಲೈಟ್ ಟೌನ್ ವರ್ತುಲ ರಸ್ತೆಗೆ ಹೊಂದಿಕೊಂಡಿರುವ, 500 ಎಕರೆಯಲ್ಲಿ ಮೊದಲ ಹಂತದ ವಿನೂತನ ನಗರ ಅಸ್ತಿತ್ವಕ್ಕೆ ಬರಲಿದೆ. ಇದನ್ನು ಕ್ರಮೇಣ ಐದು ಸಾವಿರ ಎಕರೆಯವರೆಗೂ ವಿಸ್ತರಿಸಲಾಗುವುದು’ ಎಂದಿದ್ದಾರೆ.</p>.<p>‘ಇಲ್ಲಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯಕ್ಕೆ ಒತ್ತು ಕೊಡಲಾಗುವುದು. ಜಾಗತಿಕವಾಗಿ ಹೆಸರು ಮಾಡಿರುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ, ವೈದ್ಯಕೀಯ ಸಂಸ್ಥೆಗಳು ಮತ್ತು ಆರೋಗ್ಯ ಸೇವೆಗಳ ಸಂಸ್ಥೆಗಳು ನೆಲೆಯೂರಲಿವೆ. ಅದಕ್ಕಾಗಿ ₹40 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್ ಸಿಟಿ) ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಚಾಲನೆ ನೀಡಲಿದ್ದಾರೆ.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರೂ ಭಾಗವಹಿಸಲಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>‘ದಾಬಸ್ಪೇಟೆ-ದೊಡ್ಡಬಳ್ಳಾಪುರ ನಡುವೆ ಸ್ಯಾಟಲೈಟ್ ಟೌನ್ ವರ್ತುಲ ರಸ್ತೆಗೆ ಹೊಂದಿಕೊಂಡಿರುವ, 500 ಎಕರೆಯಲ್ಲಿ ಮೊದಲ ಹಂತದ ವಿನೂತನ ನಗರ ಅಸ್ತಿತ್ವಕ್ಕೆ ಬರಲಿದೆ. ಇದನ್ನು ಕ್ರಮೇಣ ಐದು ಸಾವಿರ ಎಕರೆಯವರೆಗೂ ವಿಸ್ತರಿಸಲಾಗುವುದು’ ಎಂದಿದ್ದಾರೆ.</p>.<p>‘ಇಲ್ಲಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯಕ್ಕೆ ಒತ್ತು ಕೊಡಲಾಗುವುದು. ಜಾಗತಿಕವಾಗಿ ಹೆಸರು ಮಾಡಿರುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ, ವೈದ್ಯಕೀಯ ಸಂಸ್ಥೆಗಳು ಮತ್ತು ಆರೋಗ್ಯ ಸೇವೆಗಳ ಸಂಸ್ಥೆಗಳು ನೆಲೆಯೂರಲಿವೆ. ಅದಕ್ಕಾಗಿ ₹40 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>