ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲತ್ತೇವೆ ಎನ್ನುವ ವಿಶ್ವಾಸ ನಮ್ಮಲ್ಲಿ ಇತ್ತು. ಸಂಘಟಿತವಾಗಿ ಜನರನ್ನು ತಲುಪುವ ಪ್ರಯತ್ನವನ್ನು ನಾವು ಮಾಡಿದ್ದೆವು ಆದರೂ ಕೂಡ ಜನರು ನಮಗೆ ಆಶೀರ್ವಾದ ಮಾಡಿಲ್ಲ. ಆದರೆ ಜನರು ನೀಡಿರುವ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ ವಿಜಯಪುರದಲ್ಲಿ ಹೇಳಿದರು. ಹಾಗೆ ಕೆಪಿಸಿಸಿ ಅಧ್ಯಕ್ಷಸ್ಥಾನದ ಬಗ್ಗೆ ಮಾತನಾಡಿದ ಅವರು ನಾಬು ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಅಲ್ಲ ಎಂದು ಸ್ಪಷ್ಟಪಡಿಸಿದರು.