<p><strong>ಬೆಂಗಳೂರು:</strong> ‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಅವರು ಉತ್ತಮ ಸಂಘಟಕರಾಗಿದ್ದು, ಅವರಿಗೆ ನಾಯಕತ್ವ ವಹಿಸುವ ಸಾಮರ್ಥ್ಯವಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ನಾಯಕರ ಬಳಿ ಚರ್ಚಿಸಲು ಅಧಿಕಾರ ಇದೆ’ ಎಂದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಲಿತ ಮುಖ್ಯಮಂತ್ರಿ ಕೂಗಿಗೆ ಹೈಕಮಾಂಡ್ ಉತ್ತರ ನೀಡಲಿದೆ. ಲಿಂಗಾಯತ ಸಮುದಾಯ ಕೂಡಾ ಬೇಡಿಕೆ ಇಡಬಹುದು. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದೆ’ ಎಂದರು.</p>.<p>‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಕ್ಕೆ ಬಂದಾಗ ನಾನು ಅವರನ್ನು ಭೇಟಿಯಾಗುತ್ತೇನೆ. ನನ್ನ ಆಸಕ್ತಿಯನ್ನು ಹೈಕಮಾಂಡ್ಗೆ ಹೇಳುತ್ತೇನೆ, ಬಹಿರಂಗವಾಗಿ ಹೇಳುವುದಿಲ್ಲ’ ಎಂದರು.</p>.<p>‘ಸದ್ಯದ ರಾಜಕೀಯ ಬೆಳವಣಿಗೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ’ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ಒಂದು ಮನೆ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳು ಇರುತ್ತದೆ. ನಮ್ಮ ಹೈಕಮಾಂಡ್ ತುಂಬಾ ಗಟ್ಟಿಯಾಗಿದೆ. ಏನೇ ಗೊಂದಲಗಳಿದ್ದರೂ ಎಲ್ಲವನ್ನೂ ಬಗೆಹರಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಅವರು ಉತ್ತಮ ಸಂಘಟಕರಾಗಿದ್ದು, ಅವರಿಗೆ ನಾಯಕತ್ವ ವಹಿಸುವ ಸಾಮರ್ಥ್ಯವಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ನಾಯಕರ ಬಳಿ ಚರ್ಚಿಸಲು ಅಧಿಕಾರ ಇದೆ’ ಎಂದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಲಿತ ಮುಖ್ಯಮಂತ್ರಿ ಕೂಗಿಗೆ ಹೈಕಮಾಂಡ್ ಉತ್ತರ ನೀಡಲಿದೆ. ಲಿಂಗಾಯತ ಸಮುದಾಯ ಕೂಡಾ ಬೇಡಿಕೆ ಇಡಬಹುದು. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದೆ’ ಎಂದರು.</p>.<p>‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಕ್ಕೆ ಬಂದಾಗ ನಾನು ಅವರನ್ನು ಭೇಟಿಯಾಗುತ್ತೇನೆ. ನನ್ನ ಆಸಕ್ತಿಯನ್ನು ಹೈಕಮಾಂಡ್ಗೆ ಹೇಳುತ್ತೇನೆ, ಬಹಿರಂಗವಾಗಿ ಹೇಳುವುದಿಲ್ಲ’ ಎಂದರು.</p>.<p>‘ಸದ್ಯದ ರಾಜಕೀಯ ಬೆಳವಣಿಗೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ’ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ಒಂದು ಮನೆ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳು ಇರುತ್ತದೆ. ನಮ್ಮ ಹೈಕಮಾಂಡ್ ತುಂಬಾ ಗಟ್ಟಿಯಾಗಿದೆ. ಏನೇ ಗೊಂದಲಗಳಿದ್ದರೂ ಎಲ್ಲವನ್ನೂ ಬಗೆಹರಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>