ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಸೇವೆ ಕಡ್ಡಾಯ ರದ್ದು: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

Published 8 ನವೆಂಬರ್ 2023, 16:27 IST
Last Updated 8 ನವೆಂಬರ್ 2023, 16:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಎಂಬಿಬಿಎಸ್‌ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ನಿಯಮ ರದ್ದುಪಡಿಸುವ ಉದ್ದೇಶದ ‘ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಸುಗ್ರೀವಾಜ್ಞೆ –2023’ಕ್ಕೆ ರಾಜ್ಯಪಾಲರು ಬುಧವಾರ ಅಂಕಿತ ಹಾಕಿದ್ದಾರೆ.

2012ರ ಕಾಯ್ದೆ ಮತ್ತು 2015ರ ನಿಯಮಗಳ ಅನ್ವಯ ಎಂಬಿಬಿಎಸ್‌ ಮತ್ತು ವೈದ್ಯಕೀಯ ಸ್ನಾತಕೋತ್ತರ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿತ್ತು.

ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಿತಿಗೊಳಿಸಿ  ಅಭ್ಯರ್ಥಿಗಳು ಒಂದು ವರ್ಷದ ಗ್ರಾಮೀಣ ಸೇವೆ ಮಾಡಬೇಕಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರದ ಹುದ್ದೆಗೆ ಅಭ್ಯರ್ಥಿಗಳು ಆಯ್ಕೆಯಾದರೆ, ಅಂಥವರಿಗೆ ವಿನಾಯಿತಿ ನೀಡಲು ಈ ತಿದ್ದುಪಡಿಯ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಸದ್ಯಕ್ಕೆ ವಿಧಾನ ಮಂಡಲ ಅಧಿವೇಶನ ಇಲ್ಲದೇ ಇರುವುದರಿಂದ ಮತ್ತು ಕಾಯ್ದೆಯನ್ನು ತುರ್ತಾಗಿ ಜಾರಿಗೊಳಿಸುವ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT