<p><strong>ವಿಜಯಪುರ: </strong>ಆರು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಎರಡು ಬಾರಿ ಜಯಗಳಿಸಿದ್ದ ಶಾಸಕ ಎಂ.ಸಿ. ಮನಗೂಳಿ, ಎರಡು ಬಾರಿಯೂ ಸಚಿವರಾಗಿದ್ದರು.</p>.<p>ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆತ್ಮೀಯರಾಗಿದ್ದ ಅವರು 'ಜೀವ ಇರೋವರೆಗೂ ಜೆಡಿಎಸ್ ಬಿಡುವುದಿಲ್ಲ' ಎನ್ನುತ್ತಿದ್ದರು. ಪಕ್ಷದ ಜಿಲ್ಲಾಧ್ಯಕ್ಷರಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.</p>.<p>1994 ಹಾಗೂ 2018 ರ ವಿಧಾನ ಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಮೊದಲ ಬಾರಿ ಶಾಸಕರಾಗಿದ್ದಾಗ ಜೆ.ಎಚ್.ಪಟೇಲ್ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ, ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ತೋಟಗಾರಿಕೆಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಬಿಜೆಪಿ ಮಾಜಿ ಶಾಸಕ ರಮೇಶ ಭೂಸನೂರ ವಿರುದ್ದ 2018 ರ ವಿಧಾನ ಸಭೆ ಚುನಾವಣೆಯಲ್ಲಿ 9305 ಮತಗಳ ಅಂತರದಿಂದ ಜಯ ಸಾಧಿಸಿದ್ದರು.</p>.<p>ಇದನ್ನೂ ಓದಿ.. <a href="https://www.prajavani.net/district/vijayapura/mla-mcmanagooli-no-more-800298.html"><strong>ಶಾಸಕ ಎಂ.ಸಿ.ಮನಗೂಳಿ ನಿಧನ</strong></a></p>.<p><strong>ಗುತ್ತಿ ಬಸವಣ್ಣ ಏತನೀರಾವರಿ ಯೋಜನೆ ಹರಿಕಾರ:</strong> ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗಾಗಿ ಎಂ.ಸಿ.ಮನಗೂಳಿ ಸಾಕಷ್ಟು ಶ್ರಮ ವಹಿಸಿದ್ದರು. ಅವರ ಹೋರಾಟದ ಫಲವಾಗಿ ಯೋಜನೆ ಜಾರಿಯಾಗಿತ್ತು.</p>.<p>ಸಿಂದಗಿ ಕ್ಷೇತ್ರಕ್ಕೆ ನೀರಾವರಿ ಯೋಜನೆ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು<br />ಗೋಲಗೇರಿಯಲ್ಲಿ ಮನಗೂಳಿ ಮತ್ತು ದೇವೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಿದ್ದಾರೆ.</p>.<p>ಈ ಕಂಚಿನ ಪ್ರತಿಮೆಗೆ ಕೆಲ ದುಷ್ಕರ್ಮಿಗಳು ಇತ್ತೀಚೆಗೆ ಬೆಂಕಿ ಹಚ್ಚಿ ವಿವಾದ ಸೃಷ್ಟಿಸಿದ್ದರು.</p>.<p>ಎಂ.ಸಿ.ಮನಗೂಳಿ ರಾಜಕೀಯ ಹಿನ್ನೆಲೆ:1975ರಲ್ಲಿ ವಿಜಯಪುರದ ಸಿಂದಗಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಎಂ.ಸಿ. ಮನಗೂಳಿ, ನಂತರ ಪುರಸಭೆ ಸದಸ್ಯರಾಗಿಯೂ ಕೆಲಸ ಮಾಡಿದರು.</p>.<p>1989ರಲ್ಲಿ ಸಮಾಜವಾದಿ ಜನತಾ ಪಕ್ಷದಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲುಂಡರು.</p>.<p>1994ರಲ್ಲಿ ಜನತಾದಳದ ಶಾಸಕರಾಗಿ ಆಯ್ಕೆಯಾದ ಇವರು, ಇದೇ ಅವಧಿಯಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದರು.</p>.<p>1999, 2004, 2008, 2013ರ ಚುನಾವಣೆಗಳಲ್ಲಿ ಸೋಲು ಅನುಭವಿಸಿ, 2018ರಲ್ಲಿ ಜೆಡಿಎಸ್ ಶಾಸಕರಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಆರು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಎರಡು ಬಾರಿ ಜಯಗಳಿಸಿದ್ದ ಶಾಸಕ ಎಂ.ಸಿ. ಮನಗೂಳಿ, ಎರಡು ಬಾರಿಯೂ ಸಚಿವರಾಗಿದ್ದರು.</p>.<p>ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆತ್ಮೀಯರಾಗಿದ್ದ ಅವರು 'ಜೀವ ಇರೋವರೆಗೂ ಜೆಡಿಎಸ್ ಬಿಡುವುದಿಲ್ಲ' ಎನ್ನುತ್ತಿದ್ದರು. ಪಕ್ಷದ ಜಿಲ್ಲಾಧ್ಯಕ್ಷರಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.</p>.<p>1994 ಹಾಗೂ 2018 ರ ವಿಧಾನ ಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಮೊದಲ ಬಾರಿ ಶಾಸಕರಾಗಿದ್ದಾಗ ಜೆ.ಎಚ್.ಪಟೇಲ್ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ, ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ತೋಟಗಾರಿಕೆಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಬಿಜೆಪಿ ಮಾಜಿ ಶಾಸಕ ರಮೇಶ ಭೂಸನೂರ ವಿರುದ್ದ 2018 ರ ವಿಧಾನ ಸಭೆ ಚುನಾವಣೆಯಲ್ಲಿ 9305 ಮತಗಳ ಅಂತರದಿಂದ ಜಯ ಸಾಧಿಸಿದ್ದರು.</p>.<p>ಇದನ್ನೂ ಓದಿ.. <a href="https://www.prajavani.net/district/vijayapura/mla-mcmanagooli-no-more-800298.html"><strong>ಶಾಸಕ ಎಂ.ಸಿ.ಮನಗೂಳಿ ನಿಧನ</strong></a></p>.<p><strong>ಗುತ್ತಿ ಬಸವಣ್ಣ ಏತನೀರಾವರಿ ಯೋಜನೆ ಹರಿಕಾರ:</strong> ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗಾಗಿ ಎಂ.ಸಿ.ಮನಗೂಳಿ ಸಾಕಷ್ಟು ಶ್ರಮ ವಹಿಸಿದ್ದರು. ಅವರ ಹೋರಾಟದ ಫಲವಾಗಿ ಯೋಜನೆ ಜಾರಿಯಾಗಿತ್ತು.</p>.<p>ಸಿಂದಗಿ ಕ್ಷೇತ್ರಕ್ಕೆ ನೀರಾವರಿ ಯೋಜನೆ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು<br />ಗೋಲಗೇರಿಯಲ್ಲಿ ಮನಗೂಳಿ ಮತ್ತು ದೇವೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಿದ್ದಾರೆ.</p>.<p>ಈ ಕಂಚಿನ ಪ್ರತಿಮೆಗೆ ಕೆಲ ದುಷ್ಕರ್ಮಿಗಳು ಇತ್ತೀಚೆಗೆ ಬೆಂಕಿ ಹಚ್ಚಿ ವಿವಾದ ಸೃಷ್ಟಿಸಿದ್ದರು.</p>.<p>ಎಂ.ಸಿ.ಮನಗೂಳಿ ರಾಜಕೀಯ ಹಿನ್ನೆಲೆ:1975ರಲ್ಲಿ ವಿಜಯಪುರದ ಸಿಂದಗಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಎಂ.ಸಿ. ಮನಗೂಳಿ, ನಂತರ ಪುರಸಭೆ ಸದಸ್ಯರಾಗಿಯೂ ಕೆಲಸ ಮಾಡಿದರು.</p>.<p>1989ರಲ್ಲಿ ಸಮಾಜವಾದಿ ಜನತಾ ಪಕ್ಷದಿಂದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲುಂಡರು.</p>.<p>1994ರಲ್ಲಿ ಜನತಾದಳದ ಶಾಸಕರಾಗಿ ಆಯ್ಕೆಯಾದ ಇವರು, ಇದೇ ಅವಧಿಯಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದರು.</p>.<p>1999, 2004, 2008, 2013ರ ಚುನಾವಣೆಗಳಲ್ಲಿ ಸೋಲು ಅನುಭವಿಸಿ, 2018ರಲ್ಲಿ ಜೆಡಿಎಸ್ ಶಾಸಕರಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>