‘ಶಿಕ್ಷಣ ಅಧ್ಯಯನ ವಿಷಯದಲ್ಲಿ ಮರು ಪರೀಕ್ಷೆಗೆ ಸದ್ಯದಲ್ಲೇ ದಿನಾಂಕ ನಿಗದಿಪಡಿಸಲಾಗುವುದು. ಪುನರಾವರ್ತನೆ ಸಂಬಂಧಿಸಿದಂತೆ ವರದಿ ನೀಡಲು ಶಿಕ್ಷಣ ವಿಭಾಗಕ್ಕೆ ಸೂಚನೆ ನೀಡಿದ್ದೇನೆ. ಡಿ.28ರಂದು ನಡೆಯಲಿರುವ ಸಿಂಡಿಕೇಟ್ ಸಭೆಯಲ್ಲಿ ಈ ವರದಿ ಇಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಪ್ರೊ.ಹೇಮಂತಕುಮಾರ್ ತಿಳಿಸಿದರು.