ಬೆಳಗಾವಿ: ‘ವಿಧಾನ ಪರಿಷತ್ತಿನಡಿ ಬರುವ ಎಲ್ಲ ಸಮಿತಿಗಳ ಸಭೆಯನ್ನು ಎರಡು ತಿಂಗಳಿಗೊಮ್ಮೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಂಬಂಧಪಟ್ಟ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.
‘ಸುವರ್ಣ ವಿಧಾನಸೌಧದ ಸದ್ಬಳಕೆಗಾಗಿ ಬೆಂಗಳೂರಿನಲ್ಲಿ ಕೇಂದ್ರೀತ ಹಲವು ಸರ್ಕಾರಿ ಕಚೇರಿಗಳು ಸುವರ್ಣ ವಿಧಾನ ಸೌಧದಿಂದ ಕಾರ್ಯ ನಿರ್ವಹಿಸಬೇಕು ಎಂಬುದು ಉತ್ತರ ಕರ್ನಾಟಕದ ಜನರ ಬೇಡಿಕೆ’ ಎಂದು ಅವರು ತಿಳಿಸಿದ್ದಾರೆ.