<p><strong>ಮೈಸೂರು</strong>: ' ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದು ನಿಮಿಷದಲ್ಲಿ ಪ್ರಧಾನಮಂತ್ರಿಯಿಂದ ಒಪ್ಪಿಗೆ ಕೊಡಿಸುತ್ತೇನೆ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p><p>ಇಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಕಾಂಗ್ರೆಸ್ ನವರಿಗೆ ತಮಿಳುನಾಡಿನವರನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ' ಎಂದು ಟೀಕಿಸಿದರು.</p><p>' ತಮಿಳುನಾಡನ್ನು ಧಿಕ್ಕರಿಸಿ ಯೋಜನೆ ಮಾಡಿದರೆ ಅದು ಆಗುತ್ತದೆ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ' ಎಂದು ಪ್ರಶ್ನಿಸಿದರು.</p><p>' ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು. ಸುಮ್ಮನೆ ಕಾಲಾಹರಣ ಮಾಡಿ, ನಮ್ಮ ಮೇಲೆ ಜವಾಬ್ದಾರಿ ಹೊರಿಸಿದರೆ ಏನು ಪ್ರಯೋಜನ' ಎಂದರು. </p><p>' ಕಾಂಗ್ರೆಸ್ ನವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿಯೇ ಪದೇ ಪದೇ ನನ್ನ ಹೆಸರು ಜಪಿಸುತ್ತಾರೆ. ಮಂಡ್ಯಕ್ಕೆ ನಾನು ಕೇವಲ ಸಂಸದರ ಅನುದಾನ ತಂದಿಲ್ಲ. ಹಲವು ವಿಶೇಷ ಅನುದಾನವನ್ನೂ ತಂದಿದ್ದೇವೆ. ಇದರ ಮಾಹಿತಿ ಇಲ್ಲದೆಯೇ ಮಾತನಾಡಬಾರದು' ಎಂದರು. </p><p><strong>ಪ್ರತಿಭಟನೆ</strong>: ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ದೂರಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ' ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದು ನಿಮಿಷದಲ್ಲಿ ಪ್ರಧಾನಮಂತ್ರಿಯಿಂದ ಒಪ್ಪಿಗೆ ಕೊಡಿಸುತ್ತೇನೆ' ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p><p>ಇಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಕಾಂಗ್ರೆಸ್ ನವರಿಗೆ ತಮಿಳುನಾಡಿನವರನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ' ಎಂದು ಟೀಕಿಸಿದರು.</p><p>' ತಮಿಳುನಾಡನ್ನು ಧಿಕ್ಕರಿಸಿ ಯೋಜನೆ ಮಾಡಿದರೆ ಅದು ಆಗುತ್ತದೆ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ' ಎಂದು ಪ್ರಶ್ನಿಸಿದರು.</p><p>' ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು. ಸುಮ್ಮನೆ ಕಾಲಾಹರಣ ಮಾಡಿ, ನಮ್ಮ ಮೇಲೆ ಜವಾಬ್ದಾರಿ ಹೊರಿಸಿದರೆ ಏನು ಪ್ರಯೋಜನ' ಎಂದರು. </p><p>' ಕಾಂಗ್ರೆಸ್ ನವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿಯೇ ಪದೇ ಪದೇ ನನ್ನ ಹೆಸರು ಜಪಿಸುತ್ತಾರೆ. ಮಂಡ್ಯಕ್ಕೆ ನಾನು ಕೇವಲ ಸಂಸದರ ಅನುದಾನ ತಂದಿಲ್ಲ. ಹಲವು ವಿಶೇಷ ಅನುದಾನವನ್ನೂ ತಂದಿದ್ದೇವೆ. ಇದರ ಮಾಹಿತಿ ಇಲ್ಲದೆಯೇ ಮಾತನಾಡಬಾರದು' ಎಂದರು. </p><p><strong>ಪ್ರತಿಭಟನೆ</strong>: ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ದೂರಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಪಂಚಾಯಿತಿ ಭವನದ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>