<p><strong>ನವದೆಹಲಿ:</strong> ಮೇಕೆದಾಟು ಬಳಿ ಸಮತೋಲನ ಜಲಾಶಯ ನಿರ್ಮಿಸುವ ಉದ್ದೇಶದಿಂದ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರ ಜಲ ಆಯೋಗಕ್ಕೆ ಕರ್ನಾಟಕ ಜಲಸಂಪನ್ಮೂಲ ಇಲಾಖೆ ಸಲ್ಲಿಸಿದೆ. </p>.<p>ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಜಲ ಆಯೋಗಕ್ಕೆ ರಾಜ್ಯ ಸರ್ಕಾರ 2019ರ ಜನವರಿಯಲ್ಲಿ ಸಲ್ಲಿಸಿತ್ತು. ಆಗ ಯೋಜನೆಯ ಮೊತ್ತ ₹9 ಸಾವಿರ ಕೋಟಿ ಆಗಿತ್ತು. ಡಿಪಿಆರ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ಅನುಮೋದನೆ ನೀಡಬೇಕು ಎಂದು ಜಲ ಆಯೋಗ ಷರತ್ತು ವಿಧಿಸಿತ್ತು.</p>.<p>‘ಡಿಪಿಆರ್ ಕುರಿತು ಪ್ರಾಧಿಕಾರ ಚರ್ಚೆ ನಡೆಸಬಹುದು. ಆದರೆ, ಈ ಪ್ರಸ್ತಾವದ ಆಧಾರದಲ್ಲಿ ಅಧಿಕೃತವಾಗಿ ಯಾವುದೇ ಅಭಿಪ್ರಾಯಕ್ಕೆ ಬರುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ 2022ರ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಆ ಬಳಿಕ ಡಿಪಿಆರ್ ಅನ್ನು ಜಲ ಆಯೋಗಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮರಳಿಸಿತ್ತು. </p>.<p>ಕಾವೇರಿ ನ್ಯಾಯಮಂಡಳಿ ತೀರ್ಪು ಉಲ್ಲಂಘಿಸಿ ಕರ್ನಾಟಕ ಸರ್ಕಾರವು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025ರ ನವೆಂಬರ್ 13ರಂದು ವಜಾಗೊಳಿಸಿತ್ತು. </p>.<p>ಆ ಬಳಿಕ ಜಲ ಆಯೋಗವು ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿತು. ಜಲಸಂಪನ್ಮೂಲ ಇಲಾಖೆಯಿಂದ ಕೆಲವೊಂದು ವಿವರಣೆಗಳನ್ನು ಕೇಳಿತು. ಈ ಆಕ್ಷೇಪಗಳಿಗೆ ಇಲಾಖೆಯು ಏಪ್ರಿಲ್ 21ರಂದು ಉತ್ತರ ನೀಡಿದೆ. ಜತೆಗೆ, ಯೋಜನೆಯ ಡಿಪಿಆರ್ ಸಲ್ಲಿಸಿದೆ. ಆದರೆ, ಯೋಜನಾ ಮೊತ್ತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೇಕೆದಾಟು ಬಳಿ ಸಮತೋಲನ ಜಲಾಶಯ ನಿರ್ಮಿಸುವ ಉದ್ದೇಶದಿಂದ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರ ಜಲ ಆಯೋಗಕ್ಕೆ ಕರ್ನಾಟಕ ಜಲಸಂಪನ್ಮೂಲ ಇಲಾಖೆ ಸಲ್ಲಿಸಿದೆ. </p>.<p>ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಜಲ ಆಯೋಗಕ್ಕೆ ರಾಜ್ಯ ಸರ್ಕಾರ 2019ರ ಜನವರಿಯಲ್ಲಿ ಸಲ್ಲಿಸಿತ್ತು. ಆಗ ಯೋಜನೆಯ ಮೊತ್ತ ₹9 ಸಾವಿರ ಕೋಟಿ ಆಗಿತ್ತು. ಡಿಪಿಆರ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ಅನುಮೋದನೆ ನೀಡಬೇಕು ಎಂದು ಜಲ ಆಯೋಗ ಷರತ್ತು ವಿಧಿಸಿತ್ತು.</p>.<p>‘ಡಿಪಿಆರ್ ಕುರಿತು ಪ್ರಾಧಿಕಾರ ಚರ್ಚೆ ನಡೆಸಬಹುದು. ಆದರೆ, ಈ ಪ್ರಸ್ತಾವದ ಆಧಾರದಲ್ಲಿ ಅಧಿಕೃತವಾಗಿ ಯಾವುದೇ ಅಭಿಪ್ರಾಯಕ್ಕೆ ಬರುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ 2022ರ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಆ ಬಳಿಕ ಡಿಪಿಆರ್ ಅನ್ನು ಜಲ ಆಯೋಗಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮರಳಿಸಿತ್ತು. </p>.<p>ಕಾವೇರಿ ನ್ಯಾಯಮಂಡಳಿ ತೀರ್ಪು ಉಲ್ಲಂಘಿಸಿ ಕರ್ನಾಟಕ ಸರ್ಕಾರವು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025ರ ನವೆಂಬರ್ 13ರಂದು ವಜಾಗೊಳಿಸಿತ್ತು. </p>.<p>ಆ ಬಳಿಕ ಜಲ ಆಯೋಗವು ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿತು. ಜಲಸಂಪನ್ಮೂಲ ಇಲಾಖೆಯಿಂದ ಕೆಲವೊಂದು ವಿವರಣೆಗಳನ್ನು ಕೇಳಿತು. ಈ ಆಕ್ಷೇಪಗಳಿಗೆ ಇಲಾಖೆಯು ಏಪ್ರಿಲ್ 21ರಂದು ಉತ್ತರ ನೀಡಿದೆ. ಜತೆಗೆ, ಯೋಜನೆಯ ಡಿಪಿಆರ್ ಸಲ್ಲಿಸಿದೆ. ಆದರೆ, ಯೋಜನಾ ಮೊತ್ತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>