ಆಯ್ದ ತುರ್ತು ಆರೈಕೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಇನ್ನಷ್ಟು ಕೇಂದ್ರಗಳನ್ನು ತೆರೆಯುತ್ತಿದ್ದೇವೆ. ರೋಗಿಗಳು ಹಾಗೂ ಅವರ ಕುಟುಂಬದವರನ್ನು ಒಟ್ಟುಗೂಡಿಸುವುದು ನಮ್ಮ ಗುರಿ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ಜತೆಗೆ ಪುನರ್ವಸತಿ ಕಲ್ಪಿಸಲು ರಾಜ್ಯದಾದ್ಯಂತ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಆರು ವರ್ಷ ಮನೆಯಿಂದ ಹೊರ ಇದ್ದವರೂ ಕೇಂದ್ರದ ನೆರವಿನಿಂದ ಚೇತರಿಸಿಕೊಂಡು ಮರಳಿದ್ದಾರೆ
ಡಾ. ರಜನಿ ಪಿ. ಉಪ ನಿರ್ದೇಶಕಿ (ಮಾನಸಿಕ ಆರೋಗ್ಯ) ಆರೋಗ್ಯ ಇಲಾಖೆ