<figcaption>""</figcaption>.<p><strong>ಬೆಳಗಾವಿ:</strong> ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿರುವ ಸಂದೇಶ ವೈರಲ್ ಆಗಿದೆ.</p>.<p>ಅಮಿತ್ ಶಾ ಅವರಿಗೆ ಕೋವಿಡ್–19 ತಗುಲಿರುವ ಹಿನ್ನೆಲೆಯಲ್ಲಿ ಈ ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ‘ಶಾಸಕರ ಖರೀದಿ ಕೇಂದ್ರವನ್ನು 14 ದಿನಗಳವರೆಗೆ ಮುಚ್ಚಲಾಗಿದೆ. ಮ್ಯಾನೇಜರ್ಗೆ ಕೊರೊನಾ ಪಾಸಿಟಿವ್ ಕಂಡುಬಂದಿರುವ ಕಾರಣ. ಹೀಗಾಗಿ ಯಾವುದೇ ಅನ್ಯಪಕ್ಷದ ಶಾಸಕರು ಸಂಪರ್ಕಿಸಬಾರದೆಂದು ಕೋರುತ್ತೇನೆ’ ಎಂದು ಉಲ್ಲೇಖಿಸಲಾಗಿದೆ.</p>.<p>ಇದಕ್ಕೆ ಪ್ರತಿಯಾಗಿ ಮತ್ತೊಬ್ಬರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸಂದೇಶ ಪೋಸ್ಟ್ ಮಾಡಿದ್ದಾರೆ.</p>.<p>‘ಅದೇ ರೀತಿ ನಿದ್ದೆರಾಮಯ್ಯನವರನ್ನೂ ಯಾವುದೇ ಕಾರ್ಯಕ್ರಮಕ್ಕೆ ಕರಿಯಬೇಡಿ. 14 ದಿನಗಳವರೆಗೆ ಅಮಿತ್ ಶಾ ಸೂಪರ್ ಬೆಡ್ ಕೊಡಿಸಿದ್ದಾರೆ. 14 ದಿನದವರೆಗೆ ನಿದ್ದೆ ಮಾಡುವುದೇ ನನ್ನ ಕೆಲಸ ಅಭಿಮಾನಿಗಳು ಸಹಕರಿಸಬೇಕಾಗಿ ವಿನಂತಿ ಇಂತಿ– ಗುಲಾಮ’ ಎಂದು ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಳಗಾವಿ:</strong> ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿರುವ ಸಂದೇಶ ವೈರಲ್ ಆಗಿದೆ.</p>.<p>ಅಮಿತ್ ಶಾ ಅವರಿಗೆ ಕೋವಿಡ್–19 ತಗುಲಿರುವ ಹಿನ್ನೆಲೆಯಲ್ಲಿ ಈ ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ‘ಶಾಸಕರ ಖರೀದಿ ಕೇಂದ್ರವನ್ನು 14 ದಿನಗಳವರೆಗೆ ಮುಚ್ಚಲಾಗಿದೆ. ಮ್ಯಾನೇಜರ್ಗೆ ಕೊರೊನಾ ಪಾಸಿಟಿವ್ ಕಂಡುಬಂದಿರುವ ಕಾರಣ. ಹೀಗಾಗಿ ಯಾವುದೇ ಅನ್ಯಪಕ್ಷದ ಶಾಸಕರು ಸಂಪರ್ಕಿಸಬಾರದೆಂದು ಕೋರುತ್ತೇನೆ’ ಎಂದು ಉಲ್ಲೇಖಿಸಲಾಗಿದೆ.</p>.<p>ಇದಕ್ಕೆ ಪ್ರತಿಯಾಗಿ ಮತ್ತೊಬ್ಬರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸಂದೇಶ ಪೋಸ್ಟ್ ಮಾಡಿದ್ದಾರೆ.</p>.<p>‘ಅದೇ ರೀತಿ ನಿದ್ದೆರಾಮಯ್ಯನವರನ್ನೂ ಯಾವುದೇ ಕಾರ್ಯಕ್ರಮಕ್ಕೆ ಕರಿಯಬೇಡಿ. 14 ದಿನಗಳವರೆಗೆ ಅಮಿತ್ ಶಾ ಸೂಪರ್ ಬೆಡ್ ಕೊಡಿಸಿದ್ದಾರೆ. 14 ದಿನದವರೆಗೆ ನಿದ್ದೆ ಮಾಡುವುದೇ ನನ್ನ ಕೆಲಸ ಅಭಿಮಾನಿಗಳು ಸಹಕರಿಸಬೇಕಾಗಿ ವಿನಂತಿ ಇಂತಿ– ಗುಲಾಮ’ ಎಂದು ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>