<p><strong>ನವದೆಹಲಿ:</strong> ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮೆಟಾ’ದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ‘ಮೆಟಾ’ ಗುರುವಾರ ಕ್ಷಮೆಯಾಚಿಸಿದೆ. ಅಲ್ಲದೆ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ.</p>.<p>‘ಕನ್ನಡ ಅನುವಾದದಲ್ಲಿನ ಲೋಪಕ್ಕೆ ಕಾರಣವಾದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಸರಿಪಡಿಸಲಾಗಿದೆ’ ಎಂದು ಮೆಟಾದ ವಕ್ತಾರರು ತಿಳಿಸಿದ್ದಾರೆ. </p>.<p>ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಂತಹ ಮೆಟಾದ ವೇದಿಕೆಗಳಲ್ಲಿ ಕನ್ನಡದ ದೋಷಯುಕ್ತ ಅನುವಾದವು ಸತ್ಯವನ್ನು ತಿರುಚುತ್ತಿದೆ ಮತ್ತು ಬಳಕೆದಾರರ ದಾರಿತಪ್ಪಿಸುತ್ತಿದೆ ಎಂದು ಸಿದ್ದರಾಮಯ್ಯ ದೂರಿದ್ದರು.</p>.<p>‘ಸಾಮಾಜಿಕ ಮಾಧ್ಯಮ ವೇದಿಕೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಧಿಕೃತವಾಗಿ ಸಂವಹನ ನಡೆಸುವಾಗ, ವ್ಯವಹರಿಸುವಾಗ ಈ ವೇದಿಕೆಗಳಲ್ಲಿನ ಸ್ವಯಂ ಚಾಲಿತ ಅನುವಾದಗಳು ಹೆಚ್ಚಾಗಿ ತಪ್ಪಾಗಿರುತ್ತವೆ ಮತ್ತು ಅದು ಅತ್ಯಂತ ಅಪಾಯಕಾರಿಯಾಗಿರುತ್ತದೆ ಎಂಬುದನ್ನು ನಾಗರಿಕರು ತಿಳಿದಿರಬೇಕು’ ಎಂದು ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಎಚ್ಚರಿಸಿದ್ದಾರೆ. </p>.<p>‘ಈ ಲೋಪಗಳ ಕುರಿತು ನನ್ನ ಮಾಧ್ಯಮ ಸಲಹೆಗಾರರು ಔಪಚಾರಿಕವಾಗಿ ಮೆಟಾಗೆ ಪತ್ರ ಬರೆದು ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ’ ಎಂದು ಅವರು ಪೋಸ್ಟ್ನಲ್ಲಿ ಹೇಳಿದ್ದಾರೆ. </p>.<p>‘ತಂತ್ರಜ್ಞಾನದ ದೈತ್ಯರು ಮಾಡುವ ಈ ರೀತಿಯ ನಿರ್ಲಕ್ಷ್ಯವು ಸಾರ್ವಜನಿಕ ತಿಳಿವಳಿಕೆ ಮತ್ತು ನಂಬಿಕೆಗೆ ಹಾನಿ ಮಾಡುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p>.<p>ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು, ಜುಲೈ 16ರಂದು ಮೆಟಾಗೆ ಇ–ಮೇಲ್ ಮಾಡಿದ್ದರು. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಕನ್ನಡ ವಿಷಯದ ಸ್ವಯಂ ಚಾಲಿತ ಅನುವಾದದ ಬಗ್ಗೆ ಮುಖ್ಯಮಂತ್ರಿ ಪರವಾಗಿ ಕಳವಳ ವ್ಯಕ್ತಪಡಿಸಿದ್ದರು. </p>.<p>ಅನುವಾದದ ನಿಖರತೆಯನ್ನು ವಿಶ್ವಾಸಾರ್ಹವಾಗಿ ಸುಧಾರಿಸುವವರೆಗೆ ಕನ್ನಡ ವಿಷಯದ ಸ್ವಯಂಚಾಲಿತ ಅನುವಾದ ವೈಶಿಷ್ಟ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಮೆಟಾಗೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮೆಟಾ’ದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ‘ಮೆಟಾ’ ಗುರುವಾರ ಕ್ಷಮೆಯಾಚಿಸಿದೆ. ಅಲ್ಲದೆ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ.</p>.<p>‘ಕನ್ನಡ ಅನುವಾದದಲ್ಲಿನ ಲೋಪಕ್ಕೆ ಕಾರಣವಾದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಸರಿಪಡಿಸಲಾಗಿದೆ’ ಎಂದು ಮೆಟಾದ ವಕ್ತಾರರು ತಿಳಿಸಿದ್ದಾರೆ. </p>.<p>ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಂತಹ ಮೆಟಾದ ವೇದಿಕೆಗಳಲ್ಲಿ ಕನ್ನಡದ ದೋಷಯುಕ್ತ ಅನುವಾದವು ಸತ್ಯವನ್ನು ತಿರುಚುತ್ತಿದೆ ಮತ್ತು ಬಳಕೆದಾರರ ದಾರಿತಪ್ಪಿಸುತ್ತಿದೆ ಎಂದು ಸಿದ್ದರಾಮಯ್ಯ ದೂರಿದ್ದರು.</p>.<p>‘ಸಾಮಾಜಿಕ ಮಾಧ್ಯಮ ವೇದಿಕೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಧಿಕೃತವಾಗಿ ಸಂವಹನ ನಡೆಸುವಾಗ, ವ್ಯವಹರಿಸುವಾಗ ಈ ವೇದಿಕೆಗಳಲ್ಲಿನ ಸ್ವಯಂ ಚಾಲಿತ ಅನುವಾದಗಳು ಹೆಚ್ಚಾಗಿ ತಪ್ಪಾಗಿರುತ್ತವೆ ಮತ್ತು ಅದು ಅತ್ಯಂತ ಅಪಾಯಕಾರಿಯಾಗಿರುತ್ತದೆ ಎಂಬುದನ್ನು ನಾಗರಿಕರು ತಿಳಿದಿರಬೇಕು’ ಎಂದು ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಎಚ್ಚರಿಸಿದ್ದಾರೆ. </p>.<p>‘ಈ ಲೋಪಗಳ ಕುರಿತು ನನ್ನ ಮಾಧ್ಯಮ ಸಲಹೆಗಾರರು ಔಪಚಾರಿಕವಾಗಿ ಮೆಟಾಗೆ ಪತ್ರ ಬರೆದು ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ’ ಎಂದು ಅವರು ಪೋಸ್ಟ್ನಲ್ಲಿ ಹೇಳಿದ್ದಾರೆ. </p>.<p>‘ತಂತ್ರಜ್ಞಾನದ ದೈತ್ಯರು ಮಾಡುವ ಈ ರೀತಿಯ ನಿರ್ಲಕ್ಷ್ಯವು ಸಾರ್ವಜನಿಕ ತಿಳಿವಳಿಕೆ ಮತ್ತು ನಂಬಿಕೆಗೆ ಹಾನಿ ಮಾಡುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. </p>.<p>ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು, ಜುಲೈ 16ರಂದು ಮೆಟಾಗೆ ಇ–ಮೇಲ್ ಮಾಡಿದ್ದರು. ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಕನ್ನಡ ವಿಷಯದ ಸ್ವಯಂ ಚಾಲಿತ ಅನುವಾದದ ಬಗ್ಗೆ ಮುಖ್ಯಮಂತ್ರಿ ಪರವಾಗಿ ಕಳವಳ ವ್ಯಕ್ತಪಡಿಸಿದ್ದರು. </p>.<p>ಅನುವಾದದ ನಿಖರತೆಯನ್ನು ವಿಶ್ವಾಸಾರ್ಹವಾಗಿ ಸುಧಾರಿಸುವವರೆಗೆ ಕನ್ನಡ ವಿಷಯದ ಸ್ವಯಂಚಾಲಿತ ಅನುವಾದ ವೈಶಿಷ್ಟ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಮೆಟಾಗೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>