<p><strong>ಬೆಂಗಳೂರು</strong>: ಮೆಟ್ರೊ ರೈಲು ಯೋಜನೆಯ ಈಗ ಚಾಲ್ತಿಯಲ್ಲಿರುವ ವಿವಿಧ ಮಾರ್ಗಗಳ ಕಾಮಗಾರಿಗಳು 2029 ರ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೇಳಿದರು.</p>.<p>ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು.</p>.<p>ಮೆಟ್ರೊ ಯೋಜನೆಯ ಹಂತ–2 ಎ ರಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೃಷ್ಣರಾಜಪುರದವರೆಗೆ 19.75 ಕಿ.ಮೀ ಮತ್ತು ಹಂತ–2 ಬಿ ರಲ್ಲಿ ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ ಕಾಮಗಾರಿ ನಡೆಯುತ್ತಿದ್ದು, ಒಟ್ಟು ₹14,788 ಕೋಟಿ ವೆಚ್ಚದ ಕಾಮಗಾರಿಗಳು ಚಾಲ್ತಿಯಲ್ಲಿವೆ ಎಂದರು.</p>.<p>ಅದೇ ರೀತಿ, ಹಂತ–3 ಕಾರಿಡಾರ್ 1– ಕೆಂಪಾಪುರದಿಂದ ಜೆ.ಪಿ.ನಗರ 4 ನೇ ಹಂತದವರೆಗೆ 32.15 ಕಿ.ಮೀ ಮತ್ತು ಕಾರಿಡಾರ್ 2– ಹೊಸಹಳ್ಳಿಯಿಂದ ಕಡಬಗೆರೆವರೆಗಿನ 12.50 ಕಿ.ಮೀ, ಒಟ್ಟು 44.65 ಕಿ.ಮೀ ಉದ್ದದ ₹15,611 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಗಳನ್ನು ಡಿಸೆಂಬರ್ 29 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲರು ಎಂದರು.</p>.<p>ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೊ ಮತ್ತು ರಸ್ತೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 40.50 ಕಿ.ಮೀ ಸಂಯುಕ್ತ ಮೆಟ್ರೊ ರಸ್ತೆ ಮೇಲ್ಸೇತುವೆ ಯೋಜನೆಯನ್ನು ₹8,916 ಕೋಟಿಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.</p>.<h2>ಪೆರಿಫೆರಲ್ ರಿಂಗ್ ರಸ್ತೆ:</h2>.<p>ಪೆರಿಫೆರಲ್ ರಿಂಗ್ ರಸ್ತೆ ಭಾಗ–1 ರ ಯೋಜನೆಯನ್ನು ಕೈಗೊಳ್ಳಲು ಅಗತ್ಯವಿರುವ ₹27,000 ಕೋಟಿಯನ್ನು ಹುಡ್ಕೋ ಸಂಸ್ಥೆಯಿಂದ ಸಾಲದ ರೂಪದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಈ ಸಾಲಕ್ಕೆ ಸರ್ಕಾರ ಭದ್ರತೆ ನೀಡಲಿದೆ ಎಂದರು.</p>.<p>ಯೋಜನೆ ಕಾರ್ಯಗತಗೊಳಿಸಲು 2,565 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗೊಳ್ಳಲು ಉದ್ದೇಶಿಸಲಾಗಿದೆ. ಸುಮಾರು 73 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.</p>.<h2>34 ಸ್ಥಳಗಳಲ್ಲಿ ವಸತಿ ಸಮುಚ್ಛಯ:</h2>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದಾದ್ಯಂತ 34 ಸ್ಥಳಗಳಲ್ಲಿ ವಸತಿ ಸಮುಚ್ಛಯ ನಿರ್ಮಿಸಿ ಸುಮಾರು 30,000 ಫ್ಲಾಟ್ಗಳನ್ನು ಹಂಚುವ ಗುರಿ ಹಮ್ಮಿಕೊಂಡಿದೆ. ಈ ಪೈಕಿ ಈವರೆಗೆ 25 ಯೋಜನೆಗಳಲ್ಲಿ ಒಟ್ಟು 14,909 ಫ್ಲಾಟ್ಗಳ ನಿರ್ಮಾಣ ಕಾರ್ಯಕೈಗೊಂಡಿದ್ದು, 10,615 ಫ್ಲಾಟ್ಗಳ ನಿರ್ಮಾಣ ಕಾರ್ಯಪೂರ್ಣಗೊಂಡಿದೆ ಎಂದು ಹೇಳಿದರು.</p>.<h2>ಸಂಚಾರ ನಿರ್ವಹಣೆಗೆ ಎಐ:</h2>.<p>ನಗರದಲ್ಲಿ ಸುಗಮ ಸಂಚಾರಕ್ಕಾಗಿ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮುಂಚೂಣಿಯಲ್ಲಿದ್ದಾರೆ. ಸುಸ್ಥಿರ ಸಂಚಾರ ನಿರ್ವಹಣೆಗಾಗಿ ಕೃತಕ ಬುದ್ದಿಮತ್ತೆ ಆಧಾರಿತ ಡೇಟಾ ಪ್ಲಾಟ್ ಫಾರಂ, ನೈಜ ಸಮಯದಲ್ಲಿ ಡೇಟಾವನ್ನು ಸಂಗ್ರಹಿಸಲು, ವಿಶ್ಲೇಷಿಸಲು ಮತ್ತು ತೆರವುಗೊಳಿಸಲು ಇದನ್ನು ಬಳಸಲಾಗುತ್ತಿದೆ ಎಂದು ಗೆಹಲೋತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೆಟ್ರೊ ರೈಲು ಯೋಜನೆಯ ಈಗ ಚಾಲ್ತಿಯಲ್ಲಿರುವ ವಿವಿಧ ಮಾರ್ಗಗಳ ಕಾಮಗಾರಿಗಳು 2029 ರ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೇಳಿದರು.</p>.<p>ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು.</p>.<p>ಮೆಟ್ರೊ ಯೋಜನೆಯ ಹಂತ–2 ಎ ರಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೃಷ್ಣರಾಜಪುರದವರೆಗೆ 19.75 ಕಿ.ಮೀ ಮತ್ತು ಹಂತ–2 ಬಿ ರಲ್ಲಿ ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ ಕಾಮಗಾರಿ ನಡೆಯುತ್ತಿದ್ದು, ಒಟ್ಟು ₹14,788 ಕೋಟಿ ವೆಚ್ಚದ ಕಾಮಗಾರಿಗಳು ಚಾಲ್ತಿಯಲ್ಲಿವೆ ಎಂದರು.</p>.<p>ಅದೇ ರೀತಿ, ಹಂತ–3 ಕಾರಿಡಾರ್ 1– ಕೆಂಪಾಪುರದಿಂದ ಜೆ.ಪಿ.ನಗರ 4 ನೇ ಹಂತದವರೆಗೆ 32.15 ಕಿ.ಮೀ ಮತ್ತು ಕಾರಿಡಾರ್ 2– ಹೊಸಹಳ್ಳಿಯಿಂದ ಕಡಬಗೆರೆವರೆಗಿನ 12.50 ಕಿ.ಮೀ, ಒಟ್ಟು 44.65 ಕಿ.ಮೀ ಉದ್ದದ ₹15,611 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಗಳನ್ನು ಡಿಸೆಂಬರ್ 29 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲರು ಎಂದರು.</p>.<p>ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೊ ಮತ್ತು ರಸ್ತೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 40.50 ಕಿ.ಮೀ ಸಂಯುಕ್ತ ಮೆಟ್ರೊ ರಸ್ತೆ ಮೇಲ್ಸೇತುವೆ ಯೋಜನೆಯನ್ನು ₹8,916 ಕೋಟಿಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.</p>.<h2>ಪೆರಿಫೆರಲ್ ರಿಂಗ್ ರಸ್ತೆ:</h2>.<p>ಪೆರಿಫೆರಲ್ ರಿಂಗ್ ರಸ್ತೆ ಭಾಗ–1 ರ ಯೋಜನೆಯನ್ನು ಕೈಗೊಳ್ಳಲು ಅಗತ್ಯವಿರುವ ₹27,000 ಕೋಟಿಯನ್ನು ಹುಡ್ಕೋ ಸಂಸ್ಥೆಯಿಂದ ಸಾಲದ ರೂಪದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಈ ಸಾಲಕ್ಕೆ ಸರ್ಕಾರ ಭದ್ರತೆ ನೀಡಲಿದೆ ಎಂದರು.</p>.<p>ಯೋಜನೆ ಕಾರ್ಯಗತಗೊಳಿಸಲು 2,565 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗೊಳ್ಳಲು ಉದ್ದೇಶಿಸಲಾಗಿದೆ. ಸುಮಾರು 73 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.</p>.<h2>34 ಸ್ಥಳಗಳಲ್ಲಿ ವಸತಿ ಸಮುಚ್ಛಯ:</h2>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದಾದ್ಯಂತ 34 ಸ್ಥಳಗಳಲ್ಲಿ ವಸತಿ ಸಮುಚ್ಛಯ ನಿರ್ಮಿಸಿ ಸುಮಾರು 30,000 ಫ್ಲಾಟ್ಗಳನ್ನು ಹಂಚುವ ಗುರಿ ಹಮ್ಮಿಕೊಂಡಿದೆ. ಈ ಪೈಕಿ ಈವರೆಗೆ 25 ಯೋಜನೆಗಳಲ್ಲಿ ಒಟ್ಟು 14,909 ಫ್ಲಾಟ್ಗಳ ನಿರ್ಮಾಣ ಕಾರ್ಯಕೈಗೊಂಡಿದ್ದು, 10,615 ಫ್ಲಾಟ್ಗಳ ನಿರ್ಮಾಣ ಕಾರ್ಯಪೂರ್ಣಗೊಂಡಿದೆ ಎಂದು ಹೇಳಿದರು.</p>.<h2>ಸಂಚಾರ ನಿರ್ವಹಣೆಗೆ ಎಐ:</h2>.<p>ನಗರದಲ್ಲಿ ಸುಗಮ ಸಂಚಾರಕ್ಕಾಗಿ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮುಂಚೂಣಿಯಲ್ಲಿದ್ದಾರೆ. ಸುಸ್ಥಿರ ಸಂಚಾರ ನಿರ್ವಹಣೆಗಾಗಿ ಕೃತಕ ಬುದ್ದಿಮತ್ತೆ ಆಧಾರಿತ ಡೇಟಾ ಪ್ಲಾಟ್ ಫಾರಂ, ನೈಜ ಸಮಯದಲ್ಲಿ ಡೇಟಾವನ್ನು ಸಂಗ್ರಹಿಸಲು, ವಿಶ್ಲೇಷಿಸಲು ಮತ್ತು ತೆರವುಗೊಳಿಸಲು ಇದನ್ನು ಬಳಸಲಾಗುತ್ತಿದೆ ಎಂದು ಗೆಹಲೋತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>