<p><strong>ಬೆಂಗಳೂರು</strong>: ಗ್ರಾಮೀಣ ಪ್ರದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಬಯಸುವ ಆಸಕ್ತ ಅಭ್ಯರ್ಥಿಗಳಲ್ಲಿ ಅದಕ್ಕೆ ಬೇಕಾದ ಕೌಶಲವನ್ನು ಬೆಳೆಸಲಿ ಕೇಂದ್ರ ಸರ್ಕಾರವು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಫೆಲೋಶಿಪ್’ ನೀಡುತ್ತಿದೆ.</p>.<p>ಕೇಂದ್ರ ಸರ್ಕಾರದ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ರಾಜ್ಯ ಕೌಶಲ ಅಭಿವೃದ್ಧಿ ಮಿಷನ್ ಸಹಯೋಗದಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಭಾರತೀಯ ನಿರ್ವಹಣಾ ಸಂಸ್ಥೆಯು (ಐಐಎಂಬಿ) ಸಾಮಾನ್ಯ ಪ್ರವೇಶ ಪ್ರಕ್ರಿಯೆಯ ಜವಾಬ್ದಾರಿ ಹೊತ್ತಿದೆ. ದೇಶದ 9 ಐಐಎಂಗಳ ಮೂಲಕ ಎರಡನೇ ಹಂತದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.</p>.<p>‘ಆಯ್ಕೆಯಾದ ಅಭ್ಯರ್ಥಿಗಳಿಗೆ ಐಐಎಂನಲ್ಲಿ ತರಬೇತಿ ನೀಡಲಾಗುತ್ತದೆ. ನಿರ್ವಹಣಾ ತತ್ವಗಳು, ಆರ್ಥಿಕ ಅಭಿವೃದ್ಧಿ, ಸಾರ್ವಜನಿಕ ನೀತಿ ಮತ್ತು ಕೌಶಲ ಅಭಿವೃದ್ಧಿ ಬಗ್ಗೆ ಹೇಳಿಕೊಡಲಾಗುವುದು’ ಎಂದು ಐಐಎಂಬಿ ನಿರ್ದೇಶಕ ಪ್ರೊ.ರಿಷಿಕೇಶ ಟಿ. ಕೃಷ್ಣ ಹೇಳಿದರು.</p>.<p>‘ಮೊದಲನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ 15 ಅಭ್ಯರ್ಥಿಗಳಿಗೆ ಈ ಫೆಲೋಶಿಪ್ ನೀಡಲಾಗುತ್ತಿದೆ. ಈ ವರ್ಷ ಉಳಿದ 15 ಜಿಲ್ಲೆಗಳಿಗೆ ತಲಾ ಒಬ್ಬರಂತೆ 15 ಅಭ್ಯರ್ಥಿಗಳನ್ನು ಫೆಲೋಶಿಪ್ಗೆ ಆಯ್ಕೆ ಮಾಡಿಕೊಳ್ಳಲಾಗುವುದು’ ಎಂದು ಈ ಫೆಲೋಶಿಪ್ನ ಯೋಜನಾ ನಿರ್ದೇಶಕರಾದ ಪ್ರೊ.ಎಸ್. ಬಸು ಮತ್ತು ಪ್ರೊ. ಅರ್ನಬ್ ಮುಖರ್ಜಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಮೀಣ ಪ್ರದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಬಯಸುವ ಆಸಕ್ತ ಅಭ್ಯರ್ಥಿಗಳಲ್ಲಿ ಅದಕ್ಕೆ ಬೇಕಾದ ಕೌಶಲವನ್ನು ಬೆಳೆಸಲಿ ಕೇಂದ್ರ ಸರ್ಕಾರವು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಫೆಲೋಶಿಪ್’ ನೀಡುತ್ತಿದೆ.</p>.<p>ಕೇಂದ್ರ ಸರ್ಕಾರದ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ರಾಜ್ಯ ಕೌಶಲ ಅಭಿವೃದ್ಧಿ ಮಿಷನ್ ಸಹಯೋಗದಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಭಾರತೀಯ ನಿರ್ವಹಣಾ ಸಂಸ್ಥೆಯು (ಐಐಎಂಬಿ) ಸಾಮಾನ್ಯ ಪ್ರವೇಶ ಪ್ರಕ್ರಿಯೆಯ ಜವಾಬ್ದಾರಿ ಹೊತ್ತಿದೆ. ದೇಶದ 9 ಐಐಎಂಗಳ ಮೂಲಕ ಎರಡನೇ ಹಂತದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.</p>.<p>‘ಆಯ್ಕೆಯಾದ ಅಭ್ಯರ್ಥಿಗಳಿಗೆ ಐಐಎಂನಲ್ಲಿ ತರಬೇತಿ ನೀಡಲಾಗುತ್ತದೆ. ನಿರ್ವಹಣಾ ತತ್ವಗಳು, ಆರ್ಥಿಕ ಅಭಿವೃದ್ಧಿ, ಸಾರ್ವಜನಿಕ ನೀತಿ ಮತ್ತು ಕೌಶಲ ಅಭಿವೃದ್ಧಿ ಬಗ್ಗೆ ಹೇಳಿಕೊಡಲಾಗುವುದು’ ಎಂದು ಐಐಎಂಬಿ ನಿರ್ದೇಶಕ ಪ್ರೊ.ರಿಷಿಕೇಶ ಟಿ. ಕೃಷ್ಣ ಹೇಳಿದರು.</p>.<p>‘ಮೊದಲನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ 15 ಅಭ್ಯರ್ಥಿಗಳಿಗೆ ಈ ಫೆಲೋಶಿಪ್ ನೀಡಲಾಗುತ್ತಿದೆ. ಈ ವರ್ಷ ಉಳಿದ 15 ಜಿಲ್ಲೆಗಳಿಗೆ ತಲಾ ಒಬ್ಬರಂತೆ 15 ಅಭ್ಯರ್ಥಿಗಳನ್ನು ಫೆಲೋಶಿಪ್ಗೆ ಆಯ್ಕೆ ಮಾಡಿಕೊಳ್ಳಲಾಗುವುದು’ ಎಂದು ಈ ಫೆಲೋಶಿಪ್ನ ಯೋಜನಾ ನಿರ್ದೇಶಕರಾದ ಪ್ರೊ.ಎಸ್. ಬಸು ಮತ್ತು ಪ್ರೊ. ಅರ್ನಬ್ ಮುಖರ್ಜಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>