<p><strong>ಬೆಂಗಳೂರು</strong>: ‘ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರದ (2003) ಹಾಗೂ ನಾನು ಪ್ರಾಥಮಿಕ ಶಿಕ್ಷಣ ಸಚಿವನಾಗಿದ್ದ ಕಾಲದ ಕಾರ್ಯಕ್ರಮ’ ಎಂದು ಕೆಪಿಸಿಸಿ ವಕ್ತಾರ ಪ್ರೊ. ಬಿ.ಕೆ. ಚಂದ್ರಶೇಖರ್ ಹೇಳಿದ್ದಾರೆ.</p>.<p>‘ಈ ಯೋಜನೆಗೆ ಸಂಬಂಧಿಸಿದಂತೆ, ಕಾಕತಾಳೀಯವೆಂಬಂತೆ ನಾನೂ ತಮಿಳುನಾಡಿಗೆ ತೆರಳಿ, ಅಲ್ಲಿ ಎಂಜಿಆರ್ ಸರ್ಕಾರ ಆರಂಭಿಸಿದ್ದ ಈ ಯೋಜನೆಯ ಪ್ರತಿಯೊಂದು ಆಯಾಮವನ್ನು ಚರ್ಚಿಸಿದ್ದೆ. ಈ ಯೋಜನೆಯನ್ನು ಸುತ್ತೂರು ಶ್ರೀಗಳ ಸಹಯೋಗದಲ್ಲಿ ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಸೋನಿಯಾ ಗಾಂಧಿ ಉದ್ಘಾಟಿಸಿದ್ದರು’ ಎಂದಿದ್ದಾರೆ.</p>.<p>‘ಆದರೆ, ಜೂನ್ 27ರ ‘ಪ್ರಜಾವಾಣಿ’ಯಲ್ಲಿ (ಪುಟ 3ಸಿ) ಪ್ರಕಟವಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆ ಬಳಿಕ ಕೆಲವು ಶಾಲಾ ಶಿಕ್ಷಕರು ಕರೆ ಮಾಡಿ ಈ ಬಗ್ಗೆ ಪ್ರಶ್ನಿಸಿದ್ದರಿಂದ ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಯಾವುದೇ ದೃಷ್ಟಿಯಲ್ಲೂ ಇಬ್ರಾಹಿಂ ಅವರನ್ನು ಪ್ರಶ್ನಿಸುವ ಪ್ರಯತ್ನವಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ ಕುರಿತು ಅವರು ಹೇಳಿಕೆ ನೀಡುವ ಸಂದರ್ಭದಲ್ಲಿ, ‘ಒಂದು ರೂಗೆ ಒಂದು ಕಿಲೋ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ತಮಿಳುನಾಡಿನಲ್ಲಿ ಎರಡು ದಿನ ಕುಳಿತು ಅಧ್ಯಯನ ಮಾಡಿ ನಾನು ಆ ಯೋಜನೆ ತಂದೆ. ಅದು ಯಶಸ್ವಿ ಆಯಿತು. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆಕೊಟ್ಟೆ‘ ಎಂದಿದ್ದರು.</p>.<p>ಬಹುಶಃ ಇಬ್ರಾಹಿಂ ಅವರ ಮನಸ್ಸಿನಲ್ಲಿದ್ದದ್ದು‘ಅನ್ನಭಾಗ್ಯ’ ಯೋಜನೆ ಇರಬಹುದು. ‘ಮಧ್ಯಾಹ್ನದ ಊಟ’ದ ಬಗ್ಗೆ ಶಿಕ್ಷಕರಲ್ಲಿ ಗೊಂದಲವಾದಂತಿದೆ’ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರದ (2003) ಹಾಗೂ ನಾನು ಪ್ರಾಥಮಿಕ ಶಿಕ್ಷಣ ಸಚಿವನಾಗಿದ್ದ ಕಾಲದ ಕಾರ್ಯಕ್ರಮ’ ಎಂದು ಕೆಪಿಸಿಸಿ ವಕ್ತಾರ ಪ್ರೊ. ಬಿ.ಕೆ. ಚಂದ್ರಶೇಖರ್ ಹೇಳಿದ್ದಾರೆ.</p>.<p>‘ಈ ಯೋಜನೆಗೆ ಸಂಬಂಧಿಸಿದಂತೆ, ಕಾಕತಾಳೀಯವೆಂಬಂತೆ ನಾನೂ ತಮಿಳುನಾಡಿಗೆ ತೆರಳಿ, ಅಲ್ಲಿ ಎಂಜಿಆರ್ ಸರ್ಕಾರ ಆರಂಭಿಸಿದ್ದ ಈ ಯೋಜನೆಯ ಪ್ರತಿಯೊಂದು ಆಯಾಮವನ್ನು ಚರ್ಚಿಸಿದ್ದೆ. ಈ ಯೋಜನೆಯನ್ನು ಸುತ್ತೂರು ಶ್ರೀಗಳ ಸಹಯೋಗದಲ್ಲಿ ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಸೋನಿಯಾ ಗಾಂಧಿ ಉದ್ಘಾಟಿಸಿದ್ದರು’ ಎಂದಿದ್ದಾರೆ.</p>.<p>‘ಆದರೆ, ಜೂನ್ 27ರ ‘ಪ್ರಜಾವಾಣಿ’ಯಲ್ಲಿ (ಪುಟ 3ಸಿ) ಪ್ರಕಟವಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆ ಬಳಿಕ ಕೆಲವು ಶಾಲಾ ಶಿಕ್ಷಕರು ಕರೆ ಮಾಡಿ ಈ ಬಗ್ಗೆ ಪ್ರಶ್ನಿಸಿದ್ದರಿಂದ ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ. ಯಾವುದೇ ದೃಷ್ಟಿಯಲ್ಲೂ ಇಬ್ರಾಹಿಂ ಅವರನ್ನು ಪ್ರಶ್ನಿಸುವ ಪ್ರಯತ್ನವಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ ಕುರಿತು ಅವರು ಹೇಳಿಕೆ ನೀಡುವ ಸಂದರ್ಭದಲ್ಲಿ, ‘ಒಂದು ರೂಗೆ ಒಂದು ಕಿಲೋ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ತಮಿಳುನಾಡಿನಲ್ಲಿ ಎರಡು ದಿನ ಕುಳಿತು ಅಧ್ಯಯನ ಮಾಡಿ ನಾನು ಆ ಯೋಜನೆ ತಂದೆ. ಅದು ಯಶಸ್ವಿ ಆಯಿತು. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆಕೊಟ್ಟೆ‘ ಎಂದಿದ್ದರು.</p>.<p>ಬಹುಶಃ ಇಬ್ರಾಹಿಂ ಅವರ ಮನಸ್ಸಿನಲ್ಲಿದ್ದದ್ದು‘ಅನ್ನಭಾಗ್ಯ’ ಯೋಜನೆ ಇರಬಹುದು. ‘ಮಧ್ಯಾಹ್ನದ ಊಟ’ದ ಬಗ್ಗೆ ಶಿಕ್ಷಕರಲ್ಲಿ ಗೊಂದಲವಾದಂತಿದೆ’ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>