ವಿಧಾನಪರಿಷತ್ತಿನಲ್ಲಿ ಜೆಡಿಎಸ್ನ ಕೆ.ಎ.ತಿಪ್ಪೇಸ್ವಾಮಿ, ಎಸ್.ಎಲ್.ಭೋಜೇಗೌಡ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಪ್ರತಿ ಲೀಟರ್ ಹಾಲಿಗೆ ಒಕ್ಕೂಟಗಳು ₹ 28 ನೀಡಿದರೆ, ಸರ್ಕಾರ ₹ 5 ಪ್ರೋತ್ಸಾಹ ಧನ ನೀಡುತ್ತಿದೆ. ಹಾಲಿನ ಕೊರತೆ ಇರುವ ಭಾಗಗಳಲ್ಲಿ ಖಾಸಗಿಯವರು ರೈತರಿಂದ ಅಧಿಕ ದರ ನೀಡಿ ಹಾಲು ಖರೀದಿಸುತ್ತಿದ್ದಾರೆ. ಹಾಲು ಒಕ್ಕೂಟಗಳು ಹೆಚ್ಚಿನ ದರ ನೀಡಿ ಹಾಲು ಖರೀದಿಸಿದರೆ ಖಾಸಗಿ ಪೈಪೋಟಿ ಎದುರಿಸಬಹುದು. ಅಲ್ಲದೇ, ಬೆಲೆ ಏರಿಕೆಯ ಈ ದಿನಗಳಲ್ಲಿ ಹಸು, ಎಮ್ಮೆ ಸಾಕಲು ಸಾಕಷ್ಟು ಖರ್ಚು ಬರುತ್ತದೆ. ಹಾಗಾಗಿ, ದರ ಹೆಚ್ಚಳ ಖಚಿತ ಎಂದರು.