‘ಯಾವುದೇ ಕಾರಣಕ್ಕೂ ಹಾಲಿನ ದರ ಹೆಚ್ಚಿಸಬಾರದು ಎಂದು ಗ್ರಾಹಕರು ಒತ್ತಡ ಹಾಕುತ್ತಿದ್ದಾರೆ. ಈ ವಿಷಯದ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ. ಹಾಲು ಒಕ್ಕೂಟಗಳ ಮನವಿಯ ವಿಚಾರ ಮುಖ್ಯಮಂತ್ರಿಯವರ ಗಮನದಲ್ಲಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಒಕ್ಕೂಟಗಳಿಗೆ ಭರವಸೆ ನೀಡಿದ್ದೇನೆ’ ಎಂದು ಹೇಳಿದರು.