ಇದಕ್ಕೂ ಮುನ್ನ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷಾಚರಣೆ ನಂತರ, ದೇಶದ ಸಿರಿಧಾನ್ಯ ರಫ್ತಿನಲ್ಲಿ ಶೇ 30ರಷ್ಟು ಹೆಚ್ಚಳವಾಗಿದೆ. ವಿಶ್ವದಾದ್ಯಂತ ರಾಜ್ಯದ ಸಿರಿಧಾನ್ಯಗಳ ಜೊತೆಗೆ, ಬಿತ್ತನೆ ಬೀಜಕ್ಕೂ ಬೇಡಿಕೆ ಹೆಚ್ಚಿದೆ. ಹಾಗಾಗಿ, ಗುಣಮಟ್ಟದ ಬಿತ್ತನೆ ಬೀಜಗಳನ್ನು ಉತ್ಪಾದಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.