<p><strong>ಬೆಂಗಳೂರು:</strong> ಬೇಸಿಗೆ ಸಮೀಪಿಸುತ್ತಿದ್ದು, ಪದೇ ಪದೇ <em>ಕಾಳ್ಗಿಚ್ಚು</em> ಕಾಣಿಸಿಕೊಳ್ಳುವ ವಲಯ ಸೇರಿ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.</p>.<p>ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ <em>ಕಾಳ್ಗಿಚ್ಚು</em> ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆಯೂ ನಿರ್ದೇಶನ ನೀಡಿದ್ದಾರೆ.</p>.<p>ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ <em>ಕಾಳ್ಗಿಚ್ಚಿ</em>ನಿಂದ ಅರಣ್ಯಕ್ಕೆ ಆಗಿರುವ ಹಾನಿಯ ಕುರಿತು ಅರಣ್ಯ ಸಚಿವರು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.</p>.<p><em>ಕಾಳ್ಗಿಚ್ಚಿನ</em> ಬಗ್ಗೆ ಸಂಬಂಧಿತ ವಲಯಕ್ಕೆ ಮಾಹಿತಿ ಲಭಿಸಿದ ಎಷ್ಟು ಸಮಯದಲ್ಲಿ ಬೆಂಕಿ ನಂದಿಸಲು ಕ್ರಮ ವಹಿಸಲಾಗಿದೆ. ಯಾವ ಯಾವ ವಿಧಾನ ಬಳಸಲಾಗಿದೆ ಮತ್ತು ಎಷ್ಟು ಸಂಭಾವ್ಯ ಹಾನಿ ತಡೆಯಲಾಗಿದೆ ಎಂಬ ವಿವರವನ್ನು ಏಳು ದಿನಗಳ ಒಳಗಾಗಿ ನೀಡುವಂತೆಯೂ ಖಂಡ್ರೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆ ಸಮೀಪಿಸುತ್ತಿದ್ದು, ಪದೇ ಪದೇ <em>ಕಾಳ್ಗಿಚ್ಚು</em> ಕಾಣಿಸಿಕೊಳ್ಳುವ ವಲಯ ಸೇರಿ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.</p>.<p>ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ <em>ಕಾಳ್ಗಿಚ್ಚು</em> ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆಯೂ ನಿರ್ದೇಶನ ನೀಡಿದ್ದಾರೆ.</p>.<p>ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟ್ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ <em>ಕಾಳ್ಗಿಚ್ಚಿ</em>ನಿಂದ ಅರಣ್ಯಕ್ಕೆ ಆಗಿರುವ ಹಾನಿಯ ಕುರಿತು ಅರಣ್ಯ ಸಚಿವರು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.</p>.<p><em>ಕಾಳ್ಗಿಚ್ಚಿನ</em> ಬಗ್ಗೆ ಸಂಬಂಧಿತ ವಲಯಕ್ಕೆ ಮಾಹಿತಿ ಲಭಿಸಿದ ಎಷ್ಟು ಸಮಯದಲ್ಲಿ ಬೆಂಕಿ ನಂದಿಸಲು ಕ್ರಮ ವಹಿಸಲಾಗಿದೆ. ಯಾವ ಯಾವ ವಿಧಾನ ಬಳಸಲಾಗಿದೆ ಮತ್ತು ಎಷ್ಟು ಸಂಭಾವ್ಯ ಹಾನಿ ತಡೆಯಲಾಗಿದೆ ಎಂಬ ವಿವರವನ್ನು ಏಳು ದಿನಗಳ ಒಳಗಾಗಿ ನೀಡುವಂತೆಯೂ ಖಂಡ್ರೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>