<p><strong>ಬೆಂಗಳೂರು:</strong> ಕೃಷಿ ಉತ್ಪನ್ನಗಳಿಗೆ ಲಾಭದಾಯಕ ದರ ಹಾಗೂ ಪ್ರತಿ ಲೀಟರ್ ಹಾಲು ಖರೀದಿಗೆ ಕನಿಷ್ಠ ₹ 40 ದರ ನಿಗದಿಪಡಿಸುವುದೂ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಕಿಸಾನ್ ಸಂಘವುಒತ್ತಾಯಿಸಿದೆ.</p>.<p>ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಸಂಘದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.</p>.<p>ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರರಾಷ್ಟ್ರಪತಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ<br />ವನ್ನುಸಂಘಟನೆಯು ರಾಜ್ಯದಾದ್ಯಂತ ಹಮ್ಮಿಕೊಂಡಿತ್ತು.</p>.<p>‘ಮಳೆಯಿಂದ ಕೊಚ್ಚಿ ಹೋಗಿರುವಕೃಷಿ ಜಮೀನುಗಳಿಗೆ ಹೋಗುವ ದಾರಿಗಳನ್ನು ಸರಿಪಡಿಸಲು ಸರ್ಕಾರ ಹಣ ಮಂಜೂರು ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲ ರೈತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ₹10 ಲಕ್ಷಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದು ಸಂಘದ ಬೆಂಗಳೂರು ಘಟಕದ ಅಧ್ಯಕ್ಷಪಂಪಣ್ಣ ಆಗ್ರಹಿಸಿದರು. ‘ಬಗರ್ಹುಕುಂ ಸಾಗುವಳಿ ಸಕ್ರಮ ಯೋಜನೆ<br />ಯಡಿ ಮಂಜೂರಾದ ಭೂಮಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಬೇಕು. ರೈತರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ನೀಡಬೇಕು. ಕೋವಿಡ್ನಿಂದ ನಷ್ಟಕ್ಕೆ ಸಿಲುಕಿರುವ ರೈತರಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ಉತ್ಪನ್ನಗಳಿಗೆ ಲಾಭದಾಯಕ ದರ ಹಾಗೂ ಪ್ರತಿ ಲೀಟರ್ ಹಾಲು ಖರೀದಿಗೆ ಕನಿಷ್ಠ ₹ 40 ದರ ನಿಗದಿಪಡಿಸುವುದೂ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಕಿಸಾನ್ ಸಂಘವುಒತ್ತಾಯಿಸಿದೆ.</p>.<p>ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಸಂಘದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.</p>.<p>ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರರಾಷ್ಟ್ರಪತಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ<br />ವನ್ನುಸಂಘಟನೆಯು ರಾಜ್ಯದಾದ್ಯಂತ ಹಮ್ಮಿಕೊಂಡಿತ್ತು.</p>.<p>‘ಮಳೆಯಿಂದ ಕೊಚ್ಚಿ ಹೋಗಿರುವಕೃಷಿ ಜಮೀನುಗಳಿಗೆ ಹೋಗುವ ದಾರಿಗಳನ್ನು ಸರಿಪಡಿಸಲು ಸರ್ಕಾರ ಹಣ ಮಂಜೂರು ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲ ರೈತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ₹10 ಲಕ್ಷಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದು ಸಂಘದ ಬೆಂಗಳೂರು ಘಟಕದ ಅಧ್ಯಕ್ಷಪಂಪಣ್ಣ ಆಗ್ರಹಿಸಿದರು. ‘ಬಗರ್ಹುಕುಂ ಸಾಗುವಳಿ ಸಕ್ರಮ ಯೋಜನೆ<br />ಯಡಿ ಮಂಜೂರಾದ ಭೂಮಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಬೇಕು. ರೈತರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ನೀಡಬೇಕು. ಕೋವಿಡ್ನಿಂದ ನಷ್ಟಕ್ಕೆ ಸಿಲುಕಿರುವ ರೈತರಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>